
ನವದೆಹಲಿ: ಮಹಾರಾಷ್ಟ್ರದಲ್ಲಿ ಕೈದಿಗಳು ತಮ್ಮ ಕುಟುಂಬಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕವೇ ಮಾತುಕತೆ ನಡೆಸುವ ಸೌಲಭ್ಯವನ್ನು ದೇಶದ ಎಲ್ಲಾ ರಾಜ್ಯಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ. ಜೈಲು ಸುಧಾರಣೆ ಕುರಿತು ಅಧಿಕಾರಿಗಳು ನಡೆಸಿದ ಚರ್ಚೆ ವೇಳೆ ಜೈಲಿನಲ್ಲಿರುವ ಕೈದಿಗಳಿಗೆ ವಿಡಿಯೋ ಕಾನ್ಫರೆನ್ಸ್ ಸೇವೆ ನೀಡುವ ಸಂಬಂಧವಾಗಿ ಚರ್ಚೆ ನಡೆಸಿದ್ದಾರೆ.
ಇದು ಜಾರಿಗೆ ಬಂದಲ್ಲಿ, ಕೈದಿಗಳ ಸಂಬಂಧಿಕರು ಮೊದಲಿಗೆ ಅರ್ಜಿ ಸಲ್ಲಿಸಬೇಕು. ನಂತರ ನಿರ್ದಿಷ್ಟ ಕಾಲಮಿತಿಯಲ್ಲಿ ಮಾತನಾಡಲು ಅವಕಾಶವಿರಲಿದೆ. ಇದು ಹೊರ ರಾಜ್ಯಗಳಲ್ಲಿರುವ ಕೈದಿಗಳ ಸಂಬಂಧಿಕರಿಗೆ ಅನುಕೂಲವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.