ಸರ್ಕಾರದ ಮಹಾತ್ವಾಕಾಂಕ್ಷಿ 'ಬಡವರ ಬಂಧು' ಯೋಜನೆಗೆ ಸಿಎಂ ಚಾಲನೆ

Nov 22, 2018, 5:55 PM IST

ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಯಾವುದೇ ಶ್ಯೂರಿಟಿ ಇಲ್ಲದೆ ಕಿರು ಸಾಲ ಒದಗಿಸುವ ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಚಾಲನೆ ನೀಡಿದ್ದಾರೆ.  ಖಾಸಗಿ ವ್ಯಕ್ತಿಗಳಿಂದ ದುಬಾರಿ ಬಡ್ಡಿ ದರದಲ್ಲಿ ಸಾಲ ಪಡೆಯುವುದನ್ನು ತಪ್ಪಿಸುವುದು ಮತ್ತು ಅವರಿಂದ ನಡೆಯುವ ಕಿರುಕುಳ ತಡೆಯುವುದರ ಜತೆಗೆ ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಯೋಜನೆಯಡಿ ಕನಿಷ್ಠ 2000 ರು.ನಿಂದ ಗರಿಷ್ಠ 10000 ರು.ವರೆಗೆ ಒಬ್ಬರಿಗೆ ಸಾಲ ನೀಡಲಾಗುತ್ತದೆ.