ಜೆಡಿಎಸ್‌ನಲ್ಲಿ ಭುಗಿಲೆದ್ದ ಭಿನ್ನಮತ; ಸಿಎಂ ಪತ್ನಿ ನಾಮಪತ್ರ ಸಲ್ಲಿಕೆ ರದ್ದು!

Oct 10, 2018, 6:03 PM IST

ರಾಮನಗರ ಉಪಚುನಾವಣೆ ಜೆಡಿಎಸ್ ವರಿಷ್ಠರ ಪಾಲಿಗೆ ಕಗ್ಗಾಂಟಾಗಿದೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಇಲ್ಲಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ, ವರಿಷ್ಠರ ಈ ಏಕಪಕ್ಷೀಯ ನಿರ್ಧಾರಕ್ಕೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಅನಿತಾ ನಾಮಪತ್ರ ಸಲ್ಲಿಕೆಯನ್ನು ರದ್ದುಗೊಳಿಸಲಾಗಿದೆ.