ಲೈಂಗಿಕ ಕಿರುಕುಳ: ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು!

ಲೈಂಗಿಕ ಕಿರುಕುಳ: ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು!

Published : Oct 09, 2018, 02:21 PM ISTUpdated : Oct 09, 2018, 03:54 PM IST

ಕಾಂಗ್ರೆಸ್ ಸೊಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆಲ್‌ನ ಮುಖ್ಯಸ್ಥೆ, ನಟಿ ರಮ್ಯಾಗೆ ಇದೀಗ ಕಂಟಕ ಎದುರಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ರಮ್ಯಾ ಹೆಸರನ್ನು ಕೂಡಾ ಸೇರಿಸಲಾಗಿದೆ. 

ಕಾಂಗ್ರೆಸ್ ಸೊಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆಲ್‌ನ ಮುಖ್ಯಸ್ಥೆ, ನಟಿ ರಮ್ಯಾಗೆ ಇದೀಗ ಕಂಟಕ ಎದುರಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ರಮ್ಯಾ ಹೆಸರನ್ನು ಕೂಡಾ ಸೇರಿಸಲಾಗಿದೆ. 

ಕಳೆದ ಜು. 3ರಂದು ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದರು.  ಕೆಲಸದ ವೇಳೆ ಚಿರಾಗ್ ಪಟ್ನಾಯಕ್ ಎಂಬಾತ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆತ ತನ್ನ ಕಾಯಕ ಮಾಡಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದರು.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಪತ್ರ ಬರೆದಿದ್ದ ಆ ಮಹಿಳೆ, ಪಕ್ಷದ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ನಡೆಯುತ್ತಿರುವ ಇಂತಹ ಅನೇಕ ಸಂಗತಿಗಳ ಮೇಲೆ ಬೆಳಕು ಚೆಲ್ಲಿದ್ದರು. ಅಲ್ಲದೇ ಈ ಕುರಿತು ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನ ಮುಖ್ಯಸ್ಥೆ ದಿವ್ಯ ಸ್ಪಂದನ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದರು. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಮ್ಯಾ ಹೆಸರನ್ನು ಕೂಡಾ ಆರೋಪಪಟ್ಟಿಯಲ್ಲಿ ಸೇರ್ಪಡೆಗೊಳಿಸಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!