ಚಂದಾ ವಸೂಲಿ ವೇಳೆ ಯುವಕನ ಮೇಲೆ ಉಪ ಮೇಯರ್ ದಾದಾಗಿರಿ

Published : Sep 10, 2017, 09:20 AM ISTUpdated : Apr 11, 2018, 12:55 PM IST
ಚಂದಾ ವಸೂಲಿ ವೇಳೆ ಯುವಕನ ಮೇಲೆ ಉಪ ಮೇಯರ್ ದಾದಾಗಿರಿ

ಸಾರಾಂಶ

ಹಲ್ಲೆಗೊಳಗಾದ ಯುವಕ ಯಲ್ಲಪ್ಪ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ, ಹಲ್ಲೆ, ಜೀವ ಬೆದರಿಕೆ ಕುರಿತು ದೂರು ದಾಖಲಿಸಿದ್ದಾರೆ.

ವಿಜಯಪುರ(ಸೆ.10): ನಾಡದೇವಿ ಹಬ್ಬಕ್ಕೆ ಚಂದಾ ವಸೂಲಿ ಮಾಡುವಾಗ ವಿಜಯಪುರ ಪಾಲಿಕೆ ಉಪ ಮೇಯರ್ ಮತ್ತು ಆತನ ಬೆಂಬಲಿಗರು ಮೊಬೈಲ್ ಅಂಗಡಿಯ ನೌಕರನ ಮೇಲೆ ಗೂಂಡಾಗಿರಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಉಪ ಮೇಯರ್ ರಾಜೇಶ ದೇವಗಿರಿ ಮತ್ತು ಬೆಂಬಲಿಗರು ಮೊಬೈಲ್ ಅಂಗಡಿಯ ನೌಕರ ಯಲ್ಲಪ್ಪ ಹಂಚಿನಾಳ ಮೇಲೆ ದಾದಾಗಿರಿ ನಡೆಸಿದ್ದು, ಈ ಸಂಬಂಧ ಯಲ್ಲಪ್ಪ ಹಂಚಿನಾಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಾಡದೇವಿ ಹಬ್ಬದ ಚಂದಾ ವಸೂಲಿ ವೇಳೆ ಮೊಬೈಲ್ ಅಂಗಡಿಯ ಸಿಬ್ಬಂದಿ ಯಲ್ಲಪ್ಪ ಹಂಚಿನಾಳ ಹಾಗೂ ಉಪ ಮೇಯರ್‌ ರಾಜೇಶ ದೇವಗಿರಿ ಮತ್ತು ಬೆಂಬಲಿಗರ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಯಲ್ಲಪ್ಪನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಲ್ಲೆಗೊಳಗಾದ ಯುವಕ ಯಲ್ಲಪ್ಪ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ, ಹಲ್ಲೆ, ಜೀವ ಬೆದರಿಕೆ ಕುರಿತು ದೂರು ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!
ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ