ಪದ್ಮಶ್ರೀ ಪ್ರಶಸ್ತಿಗೆ  ಕಿದಾಂಬಿ ಶ್ರೀಕಾಂತ್ ಹೆಸರು ಶಿಫಾರಸ್ಸು

Published : Nov 01, 2017, 10:23 PM ISTUpdated : Apr 11, 2018, 12:47 PM IST
ಪದ್ಮಶ್ರೀ ಪ್ರಶಸ್ತಿಗೆ  ಕಿದಾಂಬಿ ಶ್ರೀಕಾಂತ್ ಹೆಸರು ಶಿಫಾರಸ್ಸು

ಸಾರಾಂಶ

ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್’ಗೆ ಪತ್ರ ಬರೆದಿರುವ ಸಂಸತ್ತು ವ್ಯವಹಾರ ಇಲಾಖೆ ರಾಜ್ಯ ಸಚಿವ ವಿಜಯ್ ಗೋಯಲ್,  ಭಾರತದ ಅನುಭವಿ ಶಟ್ಲರ್ ಕಿದಾಂಬಿ ಶ್ರೀಕಾಂತ್ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ.

ನವದೆಹಲಿ: ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್’ಗೆ ಪತ್ರ ಬರೆದಿರುವ ಸಂಸತ್ತು ವ್ಯವಹಾರ ಇಲಾಖೆ ರಾಜ್ಯ ಸಚಿವ ವಿಜಯ್ ಗೋಯಲ್,  ಭಾರತದ ಅನುಭವಿ ಶಟ್ಲರ್ ಕಿದಾಂಬಿ ಶ್ರೀಕಾಂತ್ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗೆ ನಾಮನಿರ್ದೇಶನ ಮಾಡುವ ದಿನಾಂಕ ಸೆ.15ಕ್ಕೆ ಮುಗಿದಿದೆ.  ಅದಾಗ್ಯೂ, ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಗೋಯಲ್, ಕ್ರೀಡಾಕ್ಷೇತ್ರದಲ್ಲಿ ಶ್ರೀಕಾಂತ್ ಮಾಡಿರುವ ಸಾಧನೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದ್ದಾರೆ.

 ಕ್ರೀಡಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಸಾಧಾರಣವಾದುದ್ದು. ದೇಶದ ಯುವಜನರಿಗೆ ಪ್ರೇರಣೆಯಾಗಿರುವ ಶ್ರೀಕಾಂತ್ ಅವರ ಸಾಧನೆಯನ್ನು ಗೌರವಿಸಬೇಕೆಂಬುವುದು ಕೋಟ್ಯಾಂತರ ಜನರ ಪೇಕ್ಷೆಯಾಗಿದೆ. ಆದುದರಿಂದ, ಅವರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕೆಂದು ನಾನು ಶಿಫಾರಸ್ಸು ಮಾಡುತ್ತೇನೆ, ಎಂದು ಗೋಯಲ್ ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?