ವಿಜಯ್ ಮಲ್ಯಗೆ ಹೊಸ ಪಟ್ಟ

Published : Jun 23, 2018, 09:12 AM IST
ವಿಜಯ್ ಮಲ್ಯಗೆ ಹೊಸ ಪಟ್ಟ

ಸಾರಾಂಶ

ಬ್ಯಾಂಕ್‌ಗಳಿಗೆ 9000 ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು ಪರಾರಿಯಾಗಿರುವ ಅಪರಾಧಿ ಎಂದು ಘೋಷಿಸಬೇಕು ಮತ್ತು ಅವರ 12500 ಕೋಟಿ ರು.ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಜಾರಿ ನಿರ್ದೇಶನಾಲಯ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. 

ನವದೆಹಲಿ/ ಮುಂಬೈ: ಬ್ಯಾಂಕ್‌ಗಳಿಗೆ 9000 ಕೋಟಿ ರು. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ ಅವರನ್ನು ಪರಾರಿಯಾಗಿರುವ ಅಪರಾಧಿ ಎಂದು ಘೋಷಿಸಬೇಕು ಮತ್ತು ಅವರ 12500 ಕೋಟಿ ರು.ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಜಾರಿ ನಿರ್ದೇಶನಾಲಯ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. 

ಬ್ಯಾಂಕ್‌ಗಳಿಗೆ ವಂಚಿಸಿ ಪರಾರಿಯಾದವರನ್ನು ಮಟ್ಟಹಾಕಲೆಂದೇ ಕೇಂದ್ರ ಸರ್ಕಾರ ಇತ್ತೀಚೆಗೆ ನೂತನ ಕಾಯ್ದೆಯೊಂದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿತ್ತು. 

ಇದೇ ಕಾಯ್ದೆ ಅನ್ವಯ ಮಲ್ಯರ ಆಸ್ತಿ ಜಪ್ತಿಗೆ ಇಡಿ ಮನವಿ ಮಾಡಿಕೊಂಡಿದೆ. ಈ ಅರ್ಜಿಯಲ್ಲಿ ಮಲ್ಯ ನೇರವಾಗಿ ಹೊಂದಿರುವ ಮತ್ತು ಪರೋಕ್ಷವಾಗಿ ಹೊಂದಿರುವ ವಿವಿಧ ಆಸ್ತಿಗಳ ಜಪ್ತಿಗೆ ಮನವಿ ಮಾಡಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!