
ನವದೆಹಲಿ (ಫೆ,23): ಬ್ಯಾಂಕುಗಳಿಗೆ ಸಾವಿರಾರು ಕೋಟಿ ಹಣವನ್ನು ಬಾಕಿಯಿಟ್ಟು ಲಂಡನ್’ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಭಾರತೀಯ ಮಾದ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.
ವಿಜಯ್ ಮಲ್ಯ ಒಡೆತನದ ಸಹಾರಾ ಫೋರ್ಸ್ ಇಂಡಿಯಾ ತಂಡವು ಫಾರ್ಮುಲಾ ರೇಸಿಂಗ್’ಗೆ ಪ್ರವೇಶ ಪಡೆದಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದರೂ ಭಾರತೀಯ ಮಾಧ್ಯಮಗಳು ಅದನ್ನು ಕಡೆಗಣಿಸುತ್ತಿವೆಯೆಂದು ಸರಣಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಫಾರ್ಮುಲಾ 1ಕ್ಕೆ ಭಾರತವು ಪ್ರವೇಶಿಸಿರುವುದು ಭಾರತೀಯ ಮಾಧ್ಯಮಗಳಿಗೆ ಹೆಮ್ಮೆಯ ವಿಚಾರವಲ್ಲ. ಅವುಗಳು ನನ್ನನ್ನು ಗುರಿಯಾಗಿಸುವುದರಲ್ಲೇ ನಿರತವಾಗಿವೆ ಎಂದು ಟ್ವೀಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.