
ಬೆಂಗಳೂರು (ಡಿ.25): ಪೊಲೀಸ್ ಮಹಾನಿರ್ದೇಶ ಓಂಪ್ರಕಾಶ್ ಆದೇಶ ಮೆರೆಗೆ ಮಾಜಿ ಸಚಿವ ಎಚ್.ವೈ.ಮೇಟಿ ಪ್ರಕರಣದ ಸಂತ್ರಸ್ತೆ ವಿಜಯಲಕ್ಷ್ಮಿ ನೀಡಿದ್ದ ದೂರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ತನಗೆ ಜೀವ ಬೆದರಿಕೆ ಇದೆಯೆಂದು, ಡಿಎಆರ್ ಪೇದೆ ಸುಭಾಷ್ ಮುಗಳಖೋಡ್ ಮತ್ತು ಮೂವರು ಸಹಚರರ ವಿರುದ್ಧ ವಿಜಯಲಕ್ಷ್ಮಿ ಬಾಗಲಕೋಟೆ ಎಸ್ಪಿಗೆ ಕಳೆದ ಡಿ.17ರಂದು ದೂರು ನೀಡಿದ್ದರು.
ಕೊಲೆ ಬೆದರಿಕೆ ಹಾಕಿರುವವರು ಮಾಜಿ ಸಚಿವ ಮೇಟಿ ವಿರುದ್ಧ ಆರೋಪಿಸುವಂತೆ ಒತ್ತಾಯಿಸಿದ್ದರು ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಳು.
ವಿಜಯಲಕ್ಷ್ಮಿ ದೂರು ಪ್ರಕರಣವನ್ನ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ತನಿಖೆ ನಡೆಸುತ್ತಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.