ವಿಜಯಲಕ್ಷ್ಮೀ ಶಿಬರೂರುಗೆ ಕರಾವಳಿ ರತ್ನ ಪ್ರಶಸ್ತಿ

Published : Jan 08, 2017, 12:08 PM ISTUpdated : Apr 11, 2018, 01:05 PM IST
ವಿಜಯಲಕ್ಷ್ಮೀ ಶಿಬರೂರುಗೆ ಕರಾವಳಿ ರತ್ನ ಪ್ರಶಸ್ತಿ

ಸಾರಾಂಶ

ಪತ್ರಿಕೋದ್ಯಮದ ಬಗ್ಗೆ ಸಮಾಜದಲ್ಲಿ ಕೆಟ್ಟ ಅಭಿಪ್ರಾಯ ಇರುವುದರ ಬಗ್ಗೆ ವಿಜಯಲಕ್ಷ್ಮೀ ವಿಷಾದ ವ್ಯಕ್ತಪಡಿಸಿದರು.

ಕಾರವಾರ(ಜ. 08): ಸುವರ್ಣನ್ಯೂಸ್'ನ ಪತ್ರಕರ್ತೆ, ಕವರ್ ಸ್ಟೋರಿ ಖ್ಯಾತಿಯ ವಿಜಯಲಕ್ಷ್ಮೀ ಶಿಬರೂರು ಅವರಿಗೆ ಕರಾವಳಿ ರತ್ನ ಪ್ರಶಸ್ತಿ ಸಿಕ್ಕಿದೆ. ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮದಂದು ವಿಜಯಲಕ್ಷ್ಮೀಗೆ ಈ ಗೌರವ ಲಭಿಸಿದೆ. ಈ ವೇಳೆ ಮಾತನಾಡಿದ ವಿಜಯಲಕ್ಷ್ಮೀ, ಪತ್ರಿಕೋದ್ಯಮದ ಬಗ್ಗೆ ಸಮಾಜದಲ್ಲಿ ಕೆಟ್ಟ ಅಭಿಪ್ರಾಯ ಇರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಪತ್ರಕರ್ತರ ಈಗಿನ ಸ್ಥಿತಿಯನ್ನು ರಾಮಾಯಣದಲ್ಲಿನ ಸೀತೆಗೆ ಹೋಲಿಸಿದ ಅವರು, ಪ್ರಾಮಾಣಿಕತೆಯನ್ನು ಸಾಬೀತುಪಡಿಸಬೇಕಾದ ಸ್ಥಿತಿ ಪತ್ರಕರ್ತರಿಗೆ ಬಂದಿದೆ ಎಂದು ಖೇದ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ, ಗುರು ಸುಧೀಂದ್ರ ಕಾಲೇಜು ಮೈದಾನದಲ್ಲಿ ನಡೆದ ಬೆಳ್ಳಿಹಬ್ಬಕ್ಕೆ ನಾಡಿನ ಹಿರಿಯ ಕವಿ ನಾಡೋಜ ಕೆಎಸ್ ನಿಸಾರ್ ಅಹ್ಮದ್ ಚಾಲನೆ ನೀಡಿದರು. ನಟ ನೆನಪಿರಲಿ ಪ್ರೇಮ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಕವಿ ನಿಸಾರ್ ಅಹ್ಮದ್, ಭಾಷೆಯ ಬೆಳವಣಿಗೆಯಲ್ಲಿ ಪತ್ರಿಕೆಯ ಪಾತ್ರದ ಮಹತ್ವವನ್ನು ತಿಳಿಹೇಳಿದರು.

- ಕಡತೋಕಾ ಮಂಜು, ಸುವರ್ಣನ್ಯೂಸ್, ಕಾರವಾರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

57 ನಿಮಿಷದಲ್ಲಿ 10KM ಮ್ಯಾರಥಾನ್ ಓಟ, ಮೃತ್ಯು ಗೆದ್ದ ಪತ್ನಿಯ ಸಾಧನೆಗೆ ಉದ್ಯಮಿ ನಿತಿನ್ ಕಾಮತ್ ಭಾವುಕ
ಹಾಸನದ 7ನೇ ತರಗತಿ ಬಾಲಕ ಏಷ್ಯನ್ ಬುಕ್‌ ಆಫ್ ರೆಕಾರ್ಡ್, ಕಣ್ಣು ಮುಚ್ಚಿಕೊಂಡೇ 1 ನಿಮಿಷದಲ್ಲಿ 8 ಕ್ಯೂಬ್ ಕಮಾಲ್!