
ವಿಜಯಪುರ (ಮೇ. 21): ಪ್ರಧಾನಿ ನರೇಂದ್ರ ಮೋದಿಯನ್ನು ಪೊಲೀಸ್ ಪೇದೆಯೊಬ್ಬರು ಅವಮಾನಿಸಿದ್ದಾರೆ. ವಿಜಯಪುರ ಡಿಆರ್ ವಿಭಾಗದ ಮುಖ್ಯ ಪೇದೆ ಶಹನವಾಜ್ ಬೇಗ್ ರಾಜಕೀಯ ಪ್ರೇರಿತ ಪೋಸ್ಟ್ ಗಳನ್ನು ಶೇರ್ ಮಾಡಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ನಮೋ ವಿರುದ್ಧದ ಪೋಸ್ಟ್ ಗಳನ್ನ ಫೇಸ್ಬುಕ್ ನಲ್ಲಿ ಶೇರ್ ಮಾಡಿದ್ದಾರೆ. ಮೋದಿ ಕೇದಾರನಾಥ ಭೇಟಿ ಹಾಗೂ ಧ್ಯಾನವನ್ನು ಲೇವಡಿ ಮಾಡಿದ್ದಾರೆ. ಅದೇ ರೀತಿ ಎಕ್ಸಿಟ್ ಪೋಲ್ ಗಳ ಬಗ್ಗೆ ಅನ್ ಅಫಿಶಿಯಲ್ ಪೇಜ್ ವೊಂದು ಹಾಕಿದ್ದ ಪೋಸ್ಟನ್ನು ಶೇರ್ ಮಾಡಿದ್ದಾರೆ.
ಮುಖ್ಯ ಪೇದೆ ಶಹನವಾಜ್ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ನೌಕರರು ರಾಜಕೀಯ ಪ್ರೇರಿತ ಪೋಸ್ಟ್ ಗಳನ್ನ ಹಾಕುವುದು ಶೇರ್ ಮಾಡುವುದು ಕಾನೂನು ಉಲ್ಲಂಘಿಸಿದಂತೆ. ಆದಾಗ್ಯೂ ಶಹನವಾಜ್ ಈ ರೀತಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಸಾರ್ವಜನಿಕ ಆಕ್ರೋಶ ವ್ಯಕ್ತವಾದಾಗ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.