
ಅಕ್ಟೋಬರ್ 2 ಬಂದರೆ ಸಾಕು ದೇಶದೆಲ್ಲೆಡೆ ಗಾಂಧಿಜಯಂತಿ ಸಂಭ್ರಮ ಸಡಗರ ಕಳೆಗಟ್ಟುತ್ತದೆ. ದೇಶವಷ್ಟೇ ಏಕೆ ಜಗತ್ತಿನ ಮೂಲೆ ಮೂಲೆಗಳಲ್ಲಿ ಅಂದು ಗಾಂಧೀಜಿ ಸ್ಮರಿಸುವ ಚಟುವಟಿಕೆಗಳು ನಡೆಯುತ್ತವೆ. ಅಂದು ಖಾದಿ ಬಟ್ಟೆಗಳ ಮೇಲೆ ಖಾದಿ ಉತ್ಪನ್ನಗಳ ಮೇಲೆ ರಿಯಾಯತಿ ಘೋಷಿಸುವ ಮೂಲಕ ಸರ್ಕಾರ ಖಾದಿ ಬಳಕೆಗೆ ಪ್ರೋತ್ಸಾಹ ನೀಡಿದರೆ, ಗಾಂಧಿ ತತ್ವಗಳಾದ ಸತ್ಯ, ಅಹಿಂಸೆ, ದುಶ್ಚಟಗಳ ನಿವಾರಣೆ, ಸ್ವಾವಲಂಬನೆ ಇತ್ಯಾದಿ ಅವರ ಬದುಕಿನ ಅಂಶಗಳ ಮೇಲೆ ಬೆಳಕು ಚೆಲ್ಲುವ ವಿಚಾರಗಳತ್ತ ವಿವಿಧ ಉಪನ್ಯಾಸಗಳು ಜರಗುತ್ತವೆ. ಗಾಂಧೀ ಬದುಕಿನ ಧಾರೆಗಳನ್ನು ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸುತ್ತೇವೆ. ಹೀಗೆ ಎಲ್ಲ ವಿಧದಲ್ಲಿಯೂ ಗಾಂಧೀಜಿಯವರ ಸ್ಮತಿಯನ್ನು ಮಾಡುತ್ತೇವೆ.
ವಿದೇಶಿ ಅಂಚೆ ಚೀಟಿಯಲ್ಲೂ ಗಾಂಧಿ ವಿರಾಜಮಾನ!
ಇಲ್ಲೊಬ್ಬ ಗಾಂಧಿ ಅನುಯಾಯಿ ಹಾಡಿನ ಮೂಲಕ ಗಾಂಧಿ ತಾತನಿಗೆ ನಮನ ಸಲ್ಲಿಸಿದ್ದಾರೆ. ಪ್ರೊ. ಬಿ ಆರ್ ಪೊಲೀಸ್ ಪಾಟೀಲ ಮಹಾತ್ಮ ಗಾಂಧಿ ಬಗ್ಗೆ ಸಾಹಿತ್ಯ ಬರೆದು ರಾಗ ಸಂಯೋಜನೆಯನ್ನೂ ಮಾಡಿದ್ದಾರೆ. ಗಾಯನ ಹಾಗೂ ಸಂಗೀತ ನಿರ್ದೇಶನವನ್ನು ಪಂ. ಶರಣ್ ಚೌಧರಿ ಮಾಡಿದ್ದಾರೆ. ಪ್ರೊ. ಬಿ ಆರ್ ಪೊಲೀಸ್ ಪಾಟೀಲ ಅವರು ವಿಜಯಪುರದವರಾಗಿದ್ದು ರಾಜ್ಯೋತ್ಸವ ಪ್ರಶಸ್ತಿ ವಿಜೇತರಾಗಿದ್ದಾರೆ. ಇಲ್ಲಿದೆ ಹಾಡು ನೀವೂ ಒಮ್ಮೆ ಕೇಳಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.