ರಾಜ್ಯದ ಈ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಗೆದ್ದಿರುವುದು ಕೇವಲ ಇಬ್ಬರು ಮಹಿಳೆಯರು ಮಾತ್ರ

Published : Mar 04, 2018, 04:04 PM ISTUpdated : Apr 11, 2018, 12:39 PM IST
ರಾಜ್ಯದ ಈ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಗೆದ್ದಿರುವುದು ಕೇವಲ ಇಬ್ಬರು ಮಹಿಳೆಯರು ಮಾತ್ರ

ಸಾರಾಂಶ

1994ರಲ್ಲಿ ಮುದ್ದೇಬಿಹಾಳ ಕ್ಷೇತ್ರದಿಂದ ವಿಮಲಾಬಾಯಿ ದೇಶಮುಖ ಅವರು ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಬಂದಿದ್ದರು.

ವಿಜಯಪುರ ಜಿಲ್ಲೆಯಿಂದ ಈವರೆಗೆ ಕೇವಲ ಇಬ್ಬರು ಮಹಿಳೆಯರು ಮಾತ್ರ ವಿಧಾನಸಭೆ ಪ್ರವೇಶಿಸಿದ್ದಾರೆ. 1957ರಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಸವನಬಾಗೇವಾಡಿ ವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಶೀಲಾ ಬಾಯಿ ಹೀರಾಚಂದ ಆಯ್ಕೆ ಯಾಗಿದ್ದರು. 1962ರಲ್ಲಿ ಮತ್ತೊಮ್ಮೆ ಅವರು ಆಯ್ಕೆಯಾಗಿದ್ದರು.

1994ರಲ್ಲಿ ಮುದ್ದೇಬಿಹಾಳ ಕ್ಷೇತ್ರದಿಂದ ವಿಮಲಾಬಾಯಿ ದೇಶಮುಖ ಅವರು ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ಬಂದಿದ್ದರು. ಜೆ.ಎಚ್. ಪಟೇಲ್ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾತೆ ಸಚಿವೆಯಾಗಿದ್ದರು. 1999, 2004 ಹಾಗೂ 2008ರಲ್ಲಿ ಮರು ಆಯ್ಕೆ ಬಯಸಿ ದೇಶಮುಖ ಅವರು ಚುನಾವಣೆಗೆ ಸ್ಪರ್ಧಿಸಿದ್ದರಾದರೂ, ಗೆಲುವು ಅವರಿಗೆ ಒಲಿಯಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ