ಪರಿವರ್ತನಾ ರ‍್ಯಾಲಿ ಆಯ್ತು, ಜನಾಶೀರ್ವಾದ ಆಯ್ತು, ಇಂದು ಶುರುವಾಗಲಿದೆ ವಿಕಾಸ ಪರ್ವ

Published : Feb 17, 2018, 09:39 AM ISTUpdated : Apr 11, 2018, 12:42 PM IST
ಪರಿವರ್ತನಾ ರ‍್ಯಾಲಿ ಆಯ್ತು, ಜನಾಶೀರ್ವಾದ ಆಯ್ತು, ಇಂದು ಶುರುವಾಗಲಿದೆ ವಿಕಾಸ ಪರ್ವ

ಸಾರಾಂಶ

ಬಿಜೆಪಿ ಪರಿವರ್ತನಾ ರ‍್ಯಾಲಿ ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ರಾಹುಲ್ ಗಾಂಧಿ ಬಂದುಹೋದ ಬೆನ್ನಲ್ಲೇ ಜೆಡಿಎಸ್ ವಿಕಾಸಪರ್ವ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರು (ಫೆ.17): ಬಿಜೆಪಿ ಪರಿವರ್ತನಾ ರ‍್ಯಾಲಿ ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ರಾಹುಲ್ ಗಾಂಧಿ ಬಂದುಹೋದ ಬೆನ್ನಲ್ಲೇ ಜೆಡಿಎಸ್ ವಿಕಾಸಪರ್ವ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದು ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಮುಖ್ಯ ರಸ್ತೆಯಲ್ಲಿರುವ ರೆಯಾನ್ ಸ್ಕೂಲ್ ಬಳಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ) ಜತೆ ಮೈತ್ರಿ ಮಾಡಿಕೊಂಡ ಬಳಿಕ ನಡೆಯುತ್ತಿರುವ ಸಮಾವೇಶದಲ್ಲಿ ಬಿಎಸ್​ಪಿಯ ಪರಮೋಚ್ಚ ನಾಯಕಿ ಮಾಯಾವತಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಈ ಮೂಲಕ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರಕ್ಕೆ ಚಾಲನೆ ಸಿಗಲಿದೆ. 500 ಎಕರೆ ಜಾಗದಲ್ಲಿ ಸುಸಜ್ಜಿತ ರ್ಪಾಂಗ್ ವ್ಯವಸ್ಥೆ, 130 ಎಕರೆ ಜಾಗದಲ್ಲಿ ಸಮಾವೇಶಕ್ಕೆ ಸಿದ್ಧತೆ ಪೂರ್ಣಗೊಂಡಿವೆ. 100 ಎಲ್​ಸಿಡಿ ಪ್ರಚಾರದ ವಾಹನಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುತ್ತದೆ. ಚುನಾವಣೆಯಲ್ಲಿ ಸ್ಪರ್ಧಿಸುವ 140 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸ್ವಚ್ಛ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಕುರಿತು ಅಭ್ಯರ್ಥಿಗಳಿಗೆ ಹಿರಿಯ ವ್ಯಕ್ತಿಯೊಬ್ಬರಿಂದ ಪ್ರತಿಜ್ಞಾವಿಧಿ ಬೋಧಿಸಲಾಗುತ್ತದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?