
ಬೆಂಗಳೂರು(ಜ.03): ಇಬ್ರಾಹಿಂ ವಿರುದ್ಧ ಮಗಳಿಗೆ ಗರ್ಭಪಾತ ಮಾಡಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.
`ನಿನ್ನೆ ರಾತ್ರಿ 9:20ಕ್ಕೆ ಇಫಾರನ್ನು ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ಕರೆತಂದಾಗ 15 ವಾರಗಳ ಗರ್ಭಿಣಿಯಾಗಿದ್ದ ಆಕೆಗೆ ತೀವ್ರ ರಕ್ತಸ್ರಾವವಾಗಿತ್ತು. ಪರಿಶೀಲನೆ ನಡೆಸಿದರೂ ನಿಖರ ಕಾರಣ ತಿಳಿದು ಬಂದಿಲ್ಲ. ಜೀವ ಉಳಿಸುವ ಸಲುವಾಗಿ ಗರ್ಭಪಾತ ಮಾಡಬೇಕಾಯಿತು. ತುರ್ತು ಸಂದರ್ಭದಲ್ಲಿ ಪತಿಯ ಅನುಮತಿ ಪಡೆಯುವ ಅಗತ್ಯವಿಲ್ಲ. ಹೀಗಾಗಿ, ಇಫಾರಿಗೆ ಗರ್ಭಪಾತ ಮಾಡಬೇಕಾಯಿತು ಎಂದು ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಸ್ಪಷ್ಟನೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.