
ಚಿಕ್ಕಮಗಳೂರು(ಜು.27): ಗ್ರಾಮದಲ್ಲಿ ತೊಂದರೆ ಇದೆ ಎಂಬ ಜ್ಯೋತಿಷಿ ಮಾತು ನಂಬಿ ಗ್ರಾಮಸ್ಥರು ಊರನ್ನೇ ತೊರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಎನ್.ಆರ್. ಪುರದ ಬಾಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಿಗುವಾನಿ ಗ್ರಾಮದ ಜನರೇ ಜ್ಯೋತಿಷಿ ಮಾತು ನಂಬಿ ಗ್ರಾಮ ತೊರೆದವರು. ಶಿಗುವಾನಿ ಗ್ರಾಮದಲ್ಲಿ ಹಕ್ಕಿಪಿಕ್ಕಿ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ.
ಆದರೆ ಕಳೆದ 8 ವರ್ಷದಲ್ಲಿ ಈ ಗ್ರಾಮದಲ್ಲಿ ೨೫ಕ್ಕೂ ಹೆಚ್ಚಿನ ಜನ ಸಾವನ್ನಪ್ಪಿದ್ದು, ಈ ಗ್ರಾಮದಲ್ಲಿ ತೊಂದರೆ ಇರುವುದೇ ಇದಕ್ಕೆ ಕಾರಣ ಎಂದು ಜ್ಯೋತಿಷಿಯೋರ್ವ ಜನರನ್ನು ನಂಬಿಸಿದ್ದ. ಜ್ಯೋತಿಷಿ ಮಾತನ್ನು ನಂಬಿದ ಹಕ್ಕಿಪಿಕ್ಕಿ ಜನಾಂಗದ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ಊರನ್ನು ತೊರೆದಿವೆ.
ಸಾಕುಪ್ರಾಣಿಗಳನ್ನು ಗ್ರಾಮದಲ್ಲೇ ಬಿಟ್ಟು ಹೋಗಿರುವ ಗ್ರಾಮಸ್ಥರು ಕುದುರೆಮುಖ, ಕುದ್ರೆಗುಂಡಿ ಮಾರ್ಗವಾಗಿ ತೀರ್ಥಹಳ್ಳಿ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.