
ಗದಗ (ಅ.24): ಚರಂಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗದಗ ತಾಲೂಕಿನ ಲಕ್ಕುಂಡಿ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಭಜನೆ ಮಾಡುವ ಮೂಲಕ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿದ್ದಾರೆ. ಸಮರ್ಪಕ ನಿರ್ವಹಣೆ ಇಲ್ಲದೆ ಗ್ರಾಮದ ತುಂಬಾ ಚರಂಡಿ ನೀರು ಹರಿಯುತ್ತಿದ್ದು, ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು.
ಆದರೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಬೇಸತ್ತ ಲಕ್ಕುಂಡಿ ಗ್ರಾಮಸ್ಥರು ಬೀದಿಯಲ್ಲಿ ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಜನಪದ ಶೈಲಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಾಟಿ ಬೀಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.