
ಗುವಾಹಟಿ[ಆ.28]: ಮೊತ್ತ ಮೊದಲ ಬಾರಿಗೆ ತಮ್ಮ ಗ್ರಾಮಕ್ಕೆ ಜಿಲ್ಲಾಧಿಕಾರಿಯೊಬ್ಬರ ಆಗಮನ ಕಂಡು ಸಂಭ್ರಮಿಸಿದ ಗ್ರಾಮಸ್ಥರು, ಜಿಲ್ಲಾಧಿಕಾರಿಯನ್ನು ಪಲ್ಲಕ್ಕಿ ಮೇಲೆ ಕೂರಿಸಿ ಅದ್ಧೂರಿ ಸ್ವಾಗತ ಕೋರಿದ್ದೂ, ಅಲ್ಲದೆ ಮೆರವಣಿಗೆ ಮೂಲಕ ಬೀಳ್ಕೊಟ್ಟ ಅಚ್ಚರಿಯ ಘಟನೆಯ ಮಿಜೋರಾಂನ ಕುಗ್ರಾಮ ತಿಸೋಪಿ ಎಂಬಲ್ಲಿ ನಡೆಸಿದೆ.
ತಿಸೋಪಿ ತಲುಪಲು ದಟ್ಟಕಾಡಿನಲ್ಲಿ ಸುಮಾರು 15 ಕಿ.ಮೀ ನಡೆದುಕೊಂಡೇ ಬರಬೇಕು. ಇದರ ಹೊರತಾಗಿಯೂ ಗ್ರಾಮದ ರಸ್ತೆ ಕಾಮಗಾರಿ ವೀಕ್ಷಿಸಲು ಸಿಯಾಹಾ ಜಿಲ್ಲಾಧಿಕಾರಿ ಭೂಪೇಂದ್ರ ಚೌಧರಿ, ಇತರೆ ಕೆಲ ಅಧಿಕಾರಿಗಳ ಜೊತೆಗೆ 15 ಕಿ.ಮೀ ನಡೆದುಕೊಂಡೇ ಇತ್ತೀಚೆಗೆ ಗ್ರಾಮಕ್ಕೆ ಬಂದಿದ್ದರು.
ಇದರಿಂದ ಹರ್ಷಗೊಂಡ ಗ್ರಾಮಸ್ಥರು ಜಿಲ್ಲಾಧಿಕಾರಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಸ್ವಾಗತಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.