ದಲಿತ ಕಾರ್ಯಕರ್ತೆ ನೇಮಕಾತಿ ವಿರೋಧಿಸಿ ಅಂಗನವಾಡಿಗೆ ಬೀಗ

Published : Sep 16, 2016, 11:46 AM ISTUpdated : Apr 11, 2018, 01:08 PM IST
ದಲಿತ ಕಾರ್ಯಕರ್ತೆ ನೇಮಕಾತಿ ವಿರೋಧಿಸಿ ಅಂಗನವಾಡಿಗೆ ಬೀಗ

ಸಾರಾಂಶ

ದಾವಣಗೆರೆ (ಸೆ.16): ದಲಿತ ಮಹಿಳೆಯೋರ್ವಳು ಅಂಗನವಾಡಿ ಕಾರ್ಯಕರ್ತೆಯಾಗಿದ್ದಕ್ಕೆ ಗ್ರಾಮಸ್ಥರು ಕಳೆದ ಎರಡು ತಿಂಗಳಿನಿಂದ  ಅಂಗನವಾಡಿ ಕಚೇರಿಗೆ ಬೀಗ ಜಡಿದಿರುವ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಎಳೆಹೊಳೆ ಅಂಗನವಾಡಿ ಕೇಂದ್ರಕ್ಕೆ ಕಳೆದ ಎರಡು ತಿಂಗಳಿಂದ ಬೀಗ ಬಿದ್ದಿದೆ.ಅಲ್ಲಿನ ಗ್ರಾಮಸ್ಥರು ಆಯ್ಕೆಯಾದ ಅಂಗನವಾಡಿ ಶಿಕ್ಷಕಿ ನೇತ್ರಾವತಿಗೆ ಅವಕಾಶವನ್ನು ನೀಡುತ್ತಿಲ್ಲ.

ಹೊಳೆಸಿರಿಗೆರೆಯಲ್ಲಿ ಅಂಗನವಾಡಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ನೇತ್ರಾವತಿ ಖಾಲಿಯಾದ ಎಳೆಹೊಳೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಗೆ ಒಟ್ಟು 16 ಅರ್ಜಿಗಳು ಬಂದಿದ್ದು ಎಲ್ಲಾ ದೃಷ್ಟಿಯಲ್ಲಿ ಅರ್ಹತೆ ಹೊಂದಿದ್ದ ಸಿ ನೇತ್ರಾವತಿಯನ್ನು ಆಯ್ಕೆಮಾಡಲಾಗಿತ್ತು. ಆದರೆ ಅಲ್ಲಿನ ಗ್ರಾಮಸ್ಥರು ಮಾತ್ರ ಈ ಮಹಿಳೆಗೆ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡಲು ಅವಕಾಶ ಕೊಡುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌