ಯಾದಗಿರಿ: ಯುರೇನಿಯಂ ನಿಕ್ಷೇಪ ಘಟಕ ಸ್ಥಾಪನೆಗೆ ವಿರೋಧಿಸಿ ಪ್ರತಿಭಟನೆ

Published : Feb 21, 2017, 06:51 AM ISTUpdated : Apr 11, 2018, 01:11 PM IST
ಯಾದಗಿರಿ: ಯುರೇನಿಯಂ ನಿಕ್ಷೇಪ ಘಟಕ ಸ್ಥಾಪನೆಗೆ ವಿರೋಧಿಸಿ ಪ್ರತಿಭಟನೆ

ಸಾರಾಂಶ

ಯುರೇನಿಯಂ ಘಟಕ ಪನರಾರಂಭ ವಿರೋಧಿಸಿ ಗ್ರಾಮಸಭೆ ನಡೆಸಿದ ಜನತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯೂ ನಡೆಸಿದ್ದಾರೆ.

ಯಾದಗಿರಿ (ಫೆ.21):  ಇಷ್ಟು ದಿನ ಸ್ತಬ್ದವಾಗಿದ್ದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಯುರೇನಿಯಂ ನಿಕ್ಷೇಪ ಹೊರ ತೆಗೆಯುವ ಘಟಕ ಮತ್ತೆ ಪುನರಾರಂಭವಾಗುವ ಸೂಚನೆಗಳು ಬಂದಿದೆ.

ಅಣು ಶಕ್ತಿ ಮತ್ತು ಬಾಹ್ಯಾಕಾಶ ರಾಜ್ಯ ಖಾತೆ ಸಚಿವರಾದ ಜಿತೇಂದ್ರ ಸಿಂಗ್ ರಾಜ್ಯಸಭೆಯಲ್ಲಿ ಈ ಹೇಳಿಕೆ ನೀಡಿರುವುದರಿಂದ ಆ ಭಾಗದ ಜನತೆ ಆತಂಕ ಪಡುವಂತಾಗಿದೆ.

ಯುರೇನಿಯಂ ಘಟಕ ಪನರಾರಂಭ ವಿರೋಧಿಸಿ ಗ್ರಾಮಸಭೆ ನಡೆಸಿದ ಜನತೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯೂ ನಡೆಸಿದ್ದಾರೆ.

ಯುರೇನಿಯಂ ಘಟಕ ಸ್ಥಾಪನೆ ಖಂಡಿಸಿ ಭೂಮಿ ತಾಯಿ ಹೋರಾಟ ಸಮಿತಿ ಸದಸ್ಯರು ಮತ್ತು ಗೋಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತೆ ಪ್ರತಿಭಟನಾ ಮೇರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಯಾವುದೇ ಕಾರಣಕ್ಕೂ ಯುರೇನಿಯಂ ಘಟಕವನ್ನ ಸ್ಥಾಪನೆ ಮಾಡಬಾರದು ಎಂದು ವಿರೋದಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದರಾಮಯ್ಯ ಮುಡಾ ಕೇಸ್, ತನಿಖಾಧಿಕಾರಿಗಳು ಸರ್ವಾಧಿಕಾರಿಗಳೇ? ಕೋರ್ಟ್‌ ನಲ್ಲಿ ಸ್ನೇಹಮಯಿ ಕೃಷ್ಣ ಕೆಂಡಾಮಂಡಲ!
ಲೇಡಿ ಬಾಸ್​ ಎಲ್ಲೆಲ್ಲೋ ಮುಟ್ಟುತ್ತಾಳೆ, ಪ್ರಚೋದಿಸ್ತಾಳೆ, ಆಮೇಲೆ... ಉದ್ಯೋಗಿಯಿಂದ ಶಾಕಿಂಗ್​ ವಿಷ್ಯ ರಿವೀಲ್​