
ಕುಪ್ಪಂ(ಜ.18): ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ಅವರ ಕುಪ್ಪಂ ಕ್ಷೇತ್ರದಲ್ಲಿ ಮಹಿಳೆಯರಿಂದಲೇ ಮಹಿಳೆಯ ವಿವಸ್ತ್ರಗೊಳಿಸಿದ ಧಾರುಣ ಘಟನೆ ನಡೆದಿದೆ.
ಚಿತ್ತೂರು ಜಿಲ್ಲೆಯ ಶಾಂತಪುರ ಮಂಡಲಂ ಗುಂಜಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಆರೋಪದ ಮೇಲೆ ಯುವತಿಯೊಬ್ಬಳನ್ನು ಹತ್ತಾರು ಮಹಿಳೆಯರು ಮನೆಯಿಂದ ಹೊರಗೆಳೆದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ನಡೆಯುವಾಗ ಹಳ್ಳಿಯ ಜನರು ಮೂಕಪ್ರೇಕ್ಷಕರಂತೆ ನೋಡುತ್ತಿದ್ದರು. ಕುಪ್ಪಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಸ್ತ್ರಗೊಳಿಸಿದ ಮಹಿಳೆಯ ವಿರುದ್ಧ ದೂರು ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.