ಸೋತ ಬಳಿಕ ಶಿವರಾಜ್‌ ಸಿಂಗ್‌ ಚೌಹಾಣ್‌ ದೂರವಿಟ್ಟ ಬಿಜೆಪಿ ಹೈಕಮಾಂಡ್‌?

Published : Jan 17, 2019, 09:43 AM ISTUpdated : Jan 17, 2019, 09:44 AM IST
ಸೋತ ಬಳಿಕ ಶಿವರಾಜ್‌ ಸಿಂಗ್‌ ಚೌಹಾಣ್‌ ದೂರವಿಟ್ಟ ಬಿಜೆಪಿ ಹೈಕಮಾಂಡ್‌?

ಸಾರಾಂಶ

ಮೋದಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತಡೆದಿದ್ದಾರೆ ಎಂಬ ಸಂದೇಶದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದು ನಿಜಾನಾ? ಇಲ್ಲಿದೆ ಸುದ್ದಿಯಾಚೆಗಿನ ಸತ್ಯ

ಪ್ರಧಾನಿ ನರೇಂದ್ರ ಮೋದಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಬಿಜೆಪಿ ರಾಷ್ಟಾ್ರಧ್ಯಕ್ಷ ಅಮಿತ್‌ ಶಾ ತಡೆದಿದ್ದಾರೆ ಎಂಬ ಸಂದೇಶದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮೋದಿಗೆ ಹೂವಿನ ಹಾರ ಹಾಕುವ ಸಂದರ್ಭದ ಫೋಟೋದೊಂದಿಗೆ ದಿನ ಪತ್ರಿಕೆಯೊಂದು ‘ಮೋದಿಗೆ ಹಾರ ಹಾಕಲು ಮುಂದಾಗಿದ್ದ ಶಿವರಾಜ್‌ ಅನ್ನು ತಡೆದ ಅಮಿತ್‌ ಶಾ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ವರದಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಲಾಗುತ್ತಿದೆ.

ಆ ವರದಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ನಡೆದ ಘಟನೆಯಾಗಿದ್ದು, ಇತ್ತೀಚೆಗೆ ನಡೆದ ಮಧ್ಯಪ್ರದೇಶ ಚುನಾವಣೆಯಲಿ ಬಿಜೆಪಿ ಸೋತ ಬಳಿಕ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಬಿಜೆಪಿ ಹೈಕಮಾಂಡ್‌ ದೂರವಿಡುತ್ತಿದೆ ಎಂದು ಹೇಳಲಾಗಿದೆ.

ಫೇಸ್‌ಬುಕ್‌ಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ ‘ಗುಡ್‌ ಈವ್ನಿಂಗ್‌’ ಎಂಬ ದಿನಪತ್ರಿಕೆಯ ವರದಿಯನ್ನು ಪೋಸ್ಟ್‌ ಮಾಡಲಾಗಿದೆ. ಈ ಸುದ್ದಿ ನಿಜವೇ ಎಂದು ಪ್ರತಿಕೆಯ ವರದಿಯಲ್ಲಿರುವಂತೆ ಜನವರಿ 11 ಮತ್ತು 12ರಂದು ನಡೆದ ಬಿಜೆಪಿ ರಾಷ್ಟ್ರೀಯ ಸಮಾವೇಶದ ಮೂಲ ವಿಡಿಯೋವನ್ನು ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂಬುದು ಸ್ಪಷ್ಟವಾಗಿದೆ. ವಿಡಿಯೋದಲ್ಲಿ ವೇದಿಕೆ ಮೇಲೆ ಉಪಸ್ಥಿತರಿದ್ದ ಅಮಿತ್‌ ಶಾ, ಜೇಟ್ಲಿ, ನಿತಿನ್‌ ಗಡ್ಕರಿ ಮತ್ತು ಶಿವರಾಜ್‌ ಸಿಂಗ್‌ ಚೌಹಾಣ್‌ ಸೇರಿದಂತೆ ಹಲವರು ಹಾರ ಹಾಕಲು ಮುಂದಾಗಿದ್ದಾರೆ. ಹಲವರು ಒಟ್ಟಿಗೇ ನಿಂತಿದ್ದರಿಂದ ಶಿವರಾಜ್‌ ಅವರನ್ನು ಅಮಿತ್‌ ಶಾ ತಡೆಯುತ್ತಿರುವಂತೆ ಭಾಸವಾಗುತ್ತದೆ ಅಷ್ಟೆ. ವಾಸ್ತವವಾಗಿ ಆ ವೇಳೆ ಅಮಿತ್‌ ಶಾ ಇನ್ನೊಬ್ಬ ವ್ಯಕ್ತಿಯನ್ನು ಮುಂದೆ ಬರುವಂತೆ ಕರೆದಿದ್ದನ್ನು ತಪ್ಪಾಗಿ ಅರ್ಥೈಸಿ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು