
ಕೆಲ ದಿನಗಳ ಹಿಂದೆ ವಿಜಯ ದಶಮಿಯ ದಿನ ಪಂಜಾಬಿನ ಅಮೃತಸರದ ಬಳಿ ರಾವಣ ದಹನ ಮಾಡಲು ಸೇರಿದ್ದ ಜನರ ಮೇಲೆ ರೈಲು ಹರಿದು 61 ಜನರು ಸಾವಿಗೀಡಾಗಿ, 72 ಜನರು ಮೃತಪಟ್ಟಿದ್ದರು. ಈ ದುರ್ಘಟನೆಯ ಬಳಿಕ ಈ ಕುರಿತ ಸುಳ್ಳುಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಸದ್ಯ ಅನುಮಾನಾಸ್ಮದವಾಗಿ ಸೇತುವೆಯೊಂದಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯವಿರುವ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅದರೊಂದಿಗೆ ಅಮೃತಸರ ರೈಲು ದುರಂತದ ವೇಳೆ ರೈಲಿನ ಚಾಲಕನಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಇದು ಸದ್ಯ ಫೇಸ್ಬುಕ್, ವಾಟ್ಸ್ಆ್ಯಪ್, ಟ್ವೀಟರ್ನಲ್ಲಿ ವೈರಲ್ ಆಗಿದೆ.
ಆದರೆ ಅಮೃತಸರದಲ್ಲಿ ನಡೆದ ರೈಲು ದುರಂತದ ವೇಳೆ ಆ ರೈಲಿನ ಚಾಲಕನಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜವೇ ಎಂದು ಪರಿಶೀಲಿಸಿದಾಗ ಆ ಸುದ್ದಿ ಸುಳ್ಳು ಎಂಬುದು ಸ್ಪಷ್ಟವಾಗಿದೆ. ಅಮೃತಸರ ಪೊಲೀಸ್ ಕಮಿಷನರ್ ಎಸ್.ಶ್ರೀವಾಸ್ತವ ಅವರೇ ಈ ಬಗ್ಗೆ ಬೂಮ್ಗೆ ಸ್ಪಷ್ಟೀಕರಣ ನೀಡಿದ್ದು, ‘ರೈಲು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುದ್ದಿ ಸಂಪೂರ್ಣ ಸುಳ್ಳು’ಎಂದಿದ್ದಾರೆ.
ಅಲ್ಲದೆ ಸಾಮಾಜಿಕ ಮಾಧ್ಯಗಳಲ್ಲಿ ಸೇತುವೆಯೊಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುವ ವ್ಯಕ್ತಿ ರೈಲು ಚಾಲಕ ಅಲ್ಲ. ಆತ ಪಂಜಾಬ್ನ ತರಣ್ ಜಿಲ್ಲೆಯ ನಿವಾಸಿ. ಆತ ಕಳೆದ ಕೆಲ ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದ. ಇದೇ ಕಾರಣದಿಂದಾಗಿ ಆತ ಅಕ್ಟೋಬರ್ 20ರಂದು ಅಮೃತಸರದ ಬೊಹ್ರು ಗ್ರಾಮದ ಬಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಬೊಹ್ರೊ ಗ್ರಾಮದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ