
ಉತ್ತರ ಪ್ರದೇಶ (ಜ. 18): ಸಂಕ್ರಾಂತಿ ದಿನದಂದು ಉತ್ತರ ಪ್ರದೇಶದ ಕುಂಭ ಮೇಳದಲ್ಲಿ ನರೇಂದ್ರ ಮೋದಿ ಮಿಂದರು ಎಂದು ಹೇಳಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
‘ವಿ ಸಪೋರ್ಟ್ ನ್ಯಾಷನಲಿಸಂ’ ಎಂಬ ಹೆಸರಿನ ಫೇಸ್ಬುಕ್ ಪೇಜ್ ಮೊದಲಿಗೆ ಈ ಫೋಟೋಗಳನ್ನು ಪೋಸ್ಟ್ ಮಾಡಿ ‘ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳದ ಚಿತ್ರಗಳಿವು’ ಎಂದು ಬರೆದಿದೆ.
ಸದ್ಯ ಈ ಪೋಸ್ಟ್ 400 ಬಾರಿ ಶೇರ್ ಆಗಿದೆ. ಬಿಜೆಪಿ ಮತ್ತು ನರೇಂದ್ರ ಮೋದಿ ಫ್ಯಾನ್ಸ್ ಈ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಆದರೆ ನಿಜಕ್ಕೂ ಉತ್ತರ ಪ್ರದೇಶದಲ್ಲಿ ಸದ್ಯ ನಡೆಯುತ್ತಿರುವ ಕುಂಭಮೇಳದಲ್ಲಿ ನರೇಂದ್ರ ಮೋದಿ ಪಾಲ್ಗೊಂಡು ಗಂಗಾ ನದಿಯಲ್ಲಿ ಮಿಂದಿದ್ದಾರೆಯೇ ಎಂದು ಪರಿಶೀಲಿಸಿದಾಗ ಇವು ಹಳೆಯ ಫೋಟೋ ಎಂದು ತಿಳಿದುಬಂದಿದೆ. ಆಲ್ಟ್ ನ್ಯೂಸ್ ಸುದ್ದಿ ಸಂಸ್ಥೆ ಗೂಗಲ್ ರಿವರ್ಸ್ ಇಮೇಜ್ನಲ್ಲಿ ಪರಿಶೀಲಿಸಿದಾಗ ಈ ಫೋಟೋಗಳು 2004 ರದ್ದು ಎಂದು ತಿಳಿದುಬಂದಿದೆ.
ನೈದುನಿಯಾ-ಜಾಗರಣ್ ವರದಿಯಲ್ಲಿ ಈ ಬಗ್ಗೆ ಉಲ್ಲೇಖವಿದ್ದು, ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಉಜ್ಜಯಿನಿಯಲ್ಲಿ ನಡೆದ ಹಿಂದೂ ಧಾರ್ಮಿಕ ಸಮಾರಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದರು ಎಂದಿದೆ. ಸದ್ಯ ಅದೇ ಫೋಟೋವನ್ನು ಬಳಸಿಕೊಂಡು ಪ್ರಯಾಗ ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಮಿಂದ ಪ್ರಧಾನಿ ಮೋದಿ ಎಂದು ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ.
- ವೈರಲ್ ಚೆಕ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.