
ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಎಷ್ಟುಜನ ಸೇರುತ್ತಾರೆ ಎಂಬುದು ಪಕ್ಷದ ಸೋಲು ಗೆಲುವಿಗೆ ಮಾನದಂಡ ಎಂದೇ ಪರಿಗಣಿಸುತ್ತಿರುವ ಸಂದರ್ಭ ಇದು. ಹಾಗಾಗಿಯೇ ಈ ಕುರಿತ ಸುಳ್ಳುಸುದ್ದಿಗಳೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಮತದಾರರ ಮನ ಸೆಳೆಯಲು ಯತ್ನಿಸುವುದು ಇತ್ತೀಚೆಗೆ ಸಾಮಾನ್ಯವಾಗುತ್ತಿದೆ. ಸದ್ಯ ಅಂತದ್ದೇ ಸುಳ್ಳುಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
ಅದೇನೆಂದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸಿಬಿಐ ನಡುವೆ ಉಂಟಾದ ಜಟಾಪಟಿ ಬಳಿಕ ಮೋದಿ ಪಶ್ಚಿಮ ಬಂಗಾಳದಲ್ಲಿ ಸಮಾವೇಶ ನಡೆಸಿದ್ದರು. ಈ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೋದಿಗೆ ಬೆಂಬಲ ಸೂಚಿಸಿದರು ಎಂಬ ಅರ್ಥ ನೀಡುವ ಫೋಟೋಗಳು ವೈರಲ್ ಆಗುತ್ತಿವೆ.
‘ನರೇಂದ್ರ ಮೋದಿ ಫಾರ್ ಪಿಎಂ’ ಎಂಬ ಹೆಸರಿನ ಫೇಸ್ಬುಕ್ ಪೇಜ್ ಈ ಫೋಟೋಗಳನ್ನು ಪೋಸ್ಟ್ ಮಾಡಿ, ‘ಜನರ ಕೊರತೆಯಿಂದಾಗಿ ಸಮಾವೇಶಗಳನ್ನು ಮೊಟಕುಗೊಳಿಸುದೇ ಹೆಚ್ಚು. ಆದರೆ ಮೋದಿ ಬಂಗಾಳ ಸಮಾವೇಶದಲ್ಲಿ ಅತಿ ಹೆಚ್ಚು ಜನ ಸೇರಿದ್ದರಿಂದ ಪ್ರಧಾನಿಯವರು ತಮ್ಮ ಭಾಷಣವನ್ನು ಮೊಟಕು ಗೊಳಿಸಬೇಕಾಯಿತು’ ಎಂಬ ಒಕ್ಕಣೆ ಬರೆಯಲಾಗಿದೆ. ಜೊತೆಗೆ ‘ಹೌ ದ ಜೋಶ್’ ಎಂದು ಹ್ಯಾಶ್ಟ್ಯಾಗ್ ಹಾಕಿ ಶೇರ್ ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ