
ನವದೆಹಲಿ(ಅ.11): ಅಪಾಯಕಾರಿ ಕೆಮಿಕಲ್ಸ್ ಗಳನ್ನು ಬಳಕೆ ಮಾಡುತ್ತಿರುವ ಆರೋಪದ ಮೇಲೆ ಪತಂಜಲಿ ಉತ್ಪನ್ನಗಳ ಮೇಲೆ ಕತಾರ್ ನಿರ್ಬಂಧ ವಿಧಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪತಂಜಲಿಯ ಎಲ್ಲಾ ಉತ್ಪನ್ನಗಳಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆಯಾದ ಹಿನ್ನೆಲೆಯಲ್ಲಿ ಪತಂಜಲಿ ಉತ್ಪನ್ನಗಳ ಮೇಲೆ ಕತಾರ್ ನಿರ್ಬಂಧ ಹೇರಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈ ಸುದ್ದಿಯನ್ನು ನಿರಾಕರಿಸಿರುವ ಪತಂಜಲಿ ಸಂಸ್ಥೆ, ದುರುದ್ದೇಶಪೂರ್ವಕವಾಗಿ ಸಂಸ್ಥೆ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆದಿದೆ ಎಂದು ಹರಿಹಾಯ್ದಿದೆ.
ವಿವೇಕ್ ಪಾಂಡೆ ಎಂಬುವವರ ಟ್ವೀಟರ್ ಅಕೌಂಟ್ನಲ್ಲಿ ಪತಂಜಲಿ ಉತ್ಪನ್ನಗಳಿಗೆ ಕತಾರ್ ನಿಷೇಧ ಹೇರಿರುವ ಕುರಿತು ಪೋಸ್ಟ್ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪತಂಜಲಿ ವಕ್ತಾರ ಎಸ್.ಕೆ. ತಿಜಾರವಾಲಾ, ದಾಖಲೆ ಸಮೇತ ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.