ಈರುಳ್ಳಿ ರಸ ಹಚ್ಚಿದರೆ 20 ದಿನದಲ್ಲಿ ಕೂದಲು ಉದುರುವಿಕೆ ನಿಲ್ಲುತ್ತಾ?

Published : Mar 07, 2018, 10:00 AM ISTUpdated : Apr 11, 2018, 01:06 PM IST
ಈರುಳ್ಳಿ ರಸ ಹಚ್ಚಿದರೆ 20 ದಿನದಲ್ಲಿ ಕೂದಲು ಉದುರುವಿಕೆ ನಿಲ್ಲುತ್ತಾ?

ಸಾರಾಂಶ

ತಲೆಗೂದಲು ಉದುರುವಿಕೆ ಸಮಸ್ಯೆ ನಿವಾರಣೆಗೆ ಮಾರುಕಟ್ಟೆಯಲ್ಲಿ ತರಹೇವಾರಿ ಶಾಂಪೂಗಳು, ತೈಲ, ಸೋಪುಗಳು ಲಭ್ಯವಿವೆ. ಆದರೆ ಅವುಗಳನ್ನು ಬಳಸುವುದರಿಂದ ತಲೆ ಕೂದಲು ಉದುರುವಿಕೆ ಸಮಸ್ಯೆ ಇನ್ನೂ ನಿವಾರಣೆ ಆಗಿಲ್ಲವೇ. ಹಾಗಿದ್ದರೆ ಚಿಂತಿಸಬೇಕಾಗಿಲ್ಲ. ಕೆಂಪು ಈರುಳ್ಳಿಯನ್ನು ಬೇಯಿಸಿ ಅದರ ರಸವನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವಿಕೆ ಸಮಸ್ಯೆ ಕೇವಲ 20 ದಿನಗಳಲ್ಲಿ ನಿವಾರಣೆಯಾಗುತ್ತದೆ.

ಬೆಂಗಳೂರು : ತಲೆಗೂದಲು ಉದುರುವಿಕೆ ಸಮಸ್ಯೆ ನಿವಾರಣೆಗೆ ಮಾರುಕಟ್ಟೆಯಲ್ಲಿ ತರಹೇವಾರಿ ಶಾಂಪೂಗಳು, ತೈಲ, ಸೋಪುಗಳು ಲಭ್ಯವಿವೆ. ಆದರೆ ಅವುಗಳನ್ನು ಬಳಸುವುದರಿಂದ ತಲೆ ಕೂದಲು ಉದುರುವಿಕೆ ಸಮಸ್ಯೆ ಇನ್ನೂ ನಿವಾರಣೆ ಆಗಿಲ್ಲವೇ. ಹಾಗಿದ್ದರೆ ಚಿಂತಿಸಬೇಕಾಗಿಲ್ಲ. ಕೆಂಪು ಈರುಳ್ಳಿಯನ್ನು ಬೇಯಿಸಿ ಅದರ ರಸವನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವಿಕೆ ಸಮಸ್ಯೆ ಕೇವಲ 20 ದಿನಗಳಲ್ಲಿ ನಿವಾರಣೆಯಾಗುತ್ತದೆ.

ಅಲ್ಲದೇ ತಲೆಗೂದಲು ಇಲ್ಲದವರಿಗೂ ಕೂದಲು ಬರಲಿದೆಯಂತೆ! ಹೀಗೊಂದು ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಈರುಳ್ಳಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್‌ ಕೂದಲಿನ ಮರು ಹುಟ್ಟುವಿಕೆ ಮತ್ತು ಕೂದಲು ಉದುರುವಿಕೆಯ ಸಮಸ್ಯೆಯನ್ನು ನಿವಾರಣೆ ಮಾಡಲಿದೆ. ಕೂದಲಿನ ಎಲ್ಲಾ ರೀತಿಯ ಸಮಸ್ಯೆಗಳಿಗೆ ಕೆಂಪು ಈರುಳ್ಳಿ ರಾಮಬಾಣ ಎಂದು ಸಾಮಾಜಿಕ ಜಾಲತಾಣಗಲ್ಲಿ ವೈರಲ್‌ ಆಗಿರುವ ಸಂದೇಶದಲ್ಲಿ ಬಿಂಬಿಸಲಾಗುತ್ತಿದೆ.

ಒಂದು ವೇಳೆ ಈ ಸುದ್ದಿ ನಿಜವೇ ಆಗಿದ್ದರೆ ದುಬಾರಿ ಬೆಲೆಯ ಶಾಂಪೂ ಹಾಗೂ ಕೇಶತೈಲಗಳನ್ನು ಬಳಸುವ ಅಗತ್ಯವೇ ಇಲ್ಲ. ಈ ಸುದ್ದಿಯನ್ನು ಖಚಿತಪಡಿಸಿಕೊಳ್ಳಲು ವೈದ್ಯರನ್ನು ಕೇಳಿದ ಸಂದರ್ಭದಲ್ಲಿ, ಈರುಳ್ಳಿಯಲ್ಲಿ ಸಲ್ಫರ್‌ ಮತ್ತು ಅಮೈನೋ ಆ್ಯಸಿಡ್‌ ಇರುವುದರಿಂದ ಅದರ ರಸವನ್ನು ತಲೆಗೆ ಹಚ್ಚುವುದರಿಂದ ಕೆಲವೊಂದು ಲಾಭಗಳು ಇರಬಹುದು. ಆದರೆ, ಅದರಿಂದ 20 ದಿನಗಳಲ್ಲಿ ಕೂದಲು ಉದುರುವಿಕೆ ನಿವಾರಣೆ ಆಗಲಿದೆ ಎನ್ನುವುದೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಲ್ಯಾಣ ಕರ್ನಾಟಕ ನಾಡು ಈಗ ಗಾಂಜಾ ನೆಲೆವೀಡು: ನಶೆಯಲ್ಲಿ ತೇಲುತ್ತಿರೋ ಯುವ ಜನಾಂಗ
ದುಡಿಯುವ ಮಹಿಳೆಗೆ ಪತಿ ಜೀವನಾಂಶ ಕೊಡಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು