
ನವದೆಹಲಿ (ಡಿ.10): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಸಂಬಂಧದ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇಟಲಿಯ ಟ್ಯೂಸೆನಿಯ ರೆಸಾರ್ಟ್ ಒಂದರ ಅದ್ಧೂರಿ ವಿವಾಹಕ್ಕೆ ವೇದಿಕೆ ಸಜ್ಜಾಗಿದೆ.
ಹೀಗಾಗಿ ರೆಸಾರ್ಟ್'ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಆಹ್ವಾನಪತ್ರ ಹೊಂದಿದ ಅತಿಥಿಗಳಿಗಷ್ಟೇ ವಿವಾಹ ಸಮಾರಂಭಕ್ಕೆ ಪ್ರವೇಶ ಇದೆ. ಸಾಂಪ್ರದಾಯಿಕ ಪಂಜಾಬಿ ಶೈಲಿಯಲ್ಲಿ ವಿವಾಹ ಸಿದ್ಧತೆಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದ ವಿರಾಟ್ ಅನುಷ್ಕಾ ವಿವಾಹಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಆಲ್ರೌಂಡರ್ ಯುವರಾಜ್ ಸಿಂಗ್ ಅವರಿಗೆ ಮಾತ್ರ ವಿವಾಹದ ಆಮಂತ್ರಣ ನೀಡಲಾಗಿದೆ. ಕಾರಣ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತದ ಕ್ರಿಕೆಟ್ ತಂಡದ ಬಹುತೇಕ ಸದಸ್ಯರು ಬ್ಯುಸಿಯಾಗಿರುವ ಹಿನ್ನೆಲೆಯಲ್ಲಿ ತಂಡದ ಯಾರನ್ನೂ ಆಹ್ವಾನಿಸಿಲ್ಲ ಎಂದು ಕೊಹ್ಲಿಯ ಆಪ್ತ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.