
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದ್ದು, ಈ ಭಯದಿಂದ ‘ನಾನೇ ಮುಂದಿನ ಮುಖ್ಯಮಂತ್ರಿ’ ಎಂದು ಚಡಪಡಿಸುತ್ತಿದ್ದಾರೆ ಎಂದು ಮಾಜಿ ಸಂಸದ, ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಟೀಕಿಸಿದ್ದಾರೆ.
ಇಲ್ಲಿ ಗುರುವಾರ ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ನಾವು ಜನತಂತ್ರ ವ್ಯವಸ್ಥೆಯಲ್ಲಿ ಇದ್ದೇವೆ ಅನ್ನುವುದನ್ನೇ ಮರೆತಿದ್ದಾರೆ. ಭಯದಿಂದ ಚುನಾವಣೆ ಆಗುವ ಮೊದಲೇ ಮುಂದಿನ ಮುಖ್ಯಮಂತ್ರಿ ನಾನೇ ಎಂಬಂತಹ ಹೇಳಿಕೆ ನೀಡುತ್ತಿದ್ದಾರೆ, ಎಂದು ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ತಮ್ಮ ಭ್ರಮೆಯನ್ನು ಜನರಿಗೆ ನಂಬಿಸೋ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ಈಗಾಗಲೇ ಸೋಲಿನ ಭಯ ಕಾಡತೊಡಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.