
ಉಡುಪಿ(ನ.20): ಶ್ರೀಕೃಷ್ಣ ಮಠಕ್ಕೆ ಹೋಗಬೇಡಿ ಎಂದು ಸಿಎಂಗೆ ಬುದ್ಧಿಜೀವಿಗಳು ಒತ್ತಡ ಹಾಕುತ್ತಿದ್ದಾರೆ ಎಂದು ಪೇಜಾವರ ಮಠದ ಪೀಠಾಧಿಪತಿ ವಿಶ್ವೇಶತೀರ್ಥ ಸ್ವಾಮೀಜಿ ಆಪಾದನೆ ಮಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕೆಲವು ಬುದ್ಧಿಜೀವಿಗಳಿಗೆ ಶ್ರೀಕೃಷ್ಣ ಮಠ ಎಂದರೆ ಆಗುವುದಿಲ್ಲ. ಪೇಜಾವರ ಶ್ರೀಗಳನ್ನು ಕಂಡರೆ ನಮ್ಮಲ್ಲಿನ ಕೆಲ ಬುದ್ಧಿಜೀವಿಗಳಿಗೂ ಆಗಲ್ಲ.
ಶ್ರೀಕೃಷ್ಣ ಮಠ ಭೇಟಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಲವು ಬಾರಿ ಆಹ್ವಾನಿಸಿದರೂ ಅವರು ಬಂದೇ ಇಲ್ಲ. ಶ್ರೀಕೃಷ್ಣ ಮಠಕ್ಕೆ ಸಿಎಂ ಬರುವುದಿಲ್ಲ ಎಂದು ಗೊತ್ತಾಗಿ ಈ ಬಾರಿ ಆಹ್ವಾನಿಸಿಲ್ಲ. ಸಿದ್ದರಾಮಯ್ಯ ಅವರಿಗೆ ಆಸಕ್ತಿ ಇಲ್ಲ ಎಂದ ಮೇಲೆ ಈ ಬಾರಿ ಆಹ್ವಾನವನ್ನು ನೀಡಿಲ್ಲ. ಮುಂದೊಮ್ಮೆ ಬರುತ್ತೇನೆ ಎಂಬ ಆಶ್ವಾಸನೆಯನ್ನೂ ಸಿದ್ದರಾಮಯ್ಯ ನೀಡಿಲ್ಲ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾವು ಹಲವು ಬಾರಿ ಭೇಟಿ ಮಾಡಿದ್ದಾನೆ' ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.