ಎಸಿ, ಊಟ, ಚಾ: ಪೊಲೀಸ್ ಠಾಣೆಯ ವಿಶೇಷತೆ ನೋಡು ಮಚ್ಚಾ!

Published : Jul 18, 2019, 06:54 PM IST
ಎಸಿ, ಊಟ, ಚಾ: ಪೊಲೀಸ್ ಠಾಣೆಯ ವಿಶೇಷತೆ ನೋಡು ಮಚ್ಚಾ!

ಸಾರಾಂಶ

ದೇಶದಲ್ಲೇ ವಿಶಿಷ್ಟವಾದ ಪೊಲೀಸ್ ಠಾಣೆಯನ್ನೊಮ್ಮೆ ನೋಡಬನ್ನಿ| ಠಾಣೆಗೆ ಆಗಮಿಸುವವರಿಗೆ ಊಟ-ಉಪಚಾರದ ವ್ಯವಸ್ಥೆ| ಕೈದಿಗಳಿಗೂ ಏರ್ ಕೂಲರ್ ವ್ಯವಸ್ಥೆ| ರಾಜಸ್ಥಾನದ ಬಿಕನೇರ್ ಜಿಲ್ಲೆಯ ಕಾಲೂ ಪೊಲೀಸ್ ಠಾಣೆ| ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ| ನಾಗರಿಕರೊಂದಿಗೆ ಸಭ್ಯವಾಗಿ ವರ್ತಿಸುವ ಪೊಲೀಸರು| ಚಹ, ನಿಂಬೂಪಾನಿ ಕೊಟ್ಟು ಸತ್ಕರಿಸುವ ಪೊಲೀಸರು|

ಫೋಟೋ ಕೃಪೆ: ಹಿಂದೂಸ್ಥಾನ್ ಟೈಮ್ಸ್

ಕಾಲು(ಜು.18): ‘ಜೀವನದಲ್ಲಿ ಏನಾದರೂ ಮಾಡು, ಆದರೆ ಪೊಲೀಸ್ ಠಾಣೆ ಮೆಟ್ಟಿಲನ್ನು ಮಾತ್ರ ಹತ್ತಬೇಡ...’ಇದು ಪ್ರತಿಯೊಬ್ಬ ಭಾರತೀಯ ತಂದೆ ತನ್ನ ಮಕ್ಕಳಿಗೆ ಹೇಳುವ ಬುದ್ಧಿಮಾತು.

ಪೊಲೀಸ್ ಠಾಣೆ ಮೆಟ್ಟಿಲೇರುವಂತ ಕೆಲಸ ಮಾಡಬೇಡ ಎಂಬ ಕಿವಿಮಾತಿನ ಜೊತೆಗೆ, ಪೊಲೀಸ್ ಠಾಣೆ ಮೆಟ್ಟಿಲೇರಿದಾಗ ಅಲ್ಲಾಗುವ ಕಹಿ ಅನುಭವ ನಿನಗಾಗುವುದು ಬೇಡ ಎಂಬ ಬಯಕೆ ಕೂಡ ಈ ಮಾತಿನ ಹಿಂದಿದೆ.

ಪೊಲೀಸರೆಂದರೆ ಸಾರ್ವಜನಿಕರೊಂದಿಗೆ ಒರಟಾಗಿ ವರ್ತಿಸುವ, ಜೋರು ಧ್ವನಿಯಲ್ಲಿ ಹೆದರಿಸುವ ಪರಿಯೇ ನಮ್ಮ ಕಣ್ಮುಂದೆ ಬರುತ್ತದೆ. ಕಾನೂನು ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸರಿಗೆ ಕೆಲವೊಮ್ಮೆ ಇಂತಹ ಒರಟು ವತರ್ನೆ ಅನಿವಾರ್ಯವೂ ಹೌದು.

ಆದರೆ ಇಲ್ಲೊಂದು ಪೊಲೀಸ್ ಠಾಣೆಯಿದೆ. ಈ ಠಾಣೆಗೆ ನೀವು ಭೇಟಿ ನೀಡಿದರೆ ಇಂತಹ ಯಾವುದೇ ಕಹಿ ಅನುಭವ ನಿಮಗಾಗುವುದಿಲ್ಲ. ಬದಲಿಗೆ ಪೊಲೀಸರ ವಿಶೇಷ ಆತಿಥ್ಯದ ಅನುಭವ ನಿಮಗಾಗಲಿದೆ.

ಹೌದು, ರಾಜಸ್ಥಾನದ ಬಿಕನೇರ್ ಜಿಲ್ಲೆಯ ಕಾಲುವಿನಲ್ಲಿರುವ ಪೊಲೀಸ್ ಠಾಣೆ, ಇಡೀ ದೇಶದಲ್ಲೇ ವಿಶಿಷ್ಟವಾದ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಠಾಣೆಗೆ ಭೇಟಿ ನೀಡುವ ಎಲ್ಲರಿಗೂ ಮೊದಲು ತಂಪು ನೀರು, ಚಹ, ನಿಂಬೂಪಾನಿ ನೀಡಿ ಸ್ವಾಗತಿಸಲಾಗುತ್ತದೆ. ದೂರದ ಊರಿನಿಂದ ಬಂದವರಿಗಾಗಿ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.

ಅಷ್ಟೇ ಅಲ್ಲ ಠಾಣೆಯಲ್ಲಿ ಏರ್ ಕೂಲರ್ ವ್ಯವಸ್ಥೆ ಇದ್ದು, ಕೈದಿಗಳಿಗೂ ಇದನ್ನು ಬಳಸಲು ಅವಕಾಶ ನೀಡಲಾಗಿದೆ. ಜೊತೆಗೆ ಪ್ರತಿ ಲಾಕಪ್’ಗೂ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಇದೆ.

2012ರಲ್ಲಿ ಸ್ಥಾಪಿಸಲಾದ ಕಾಲು ಪೊಲೀಸ್ ಠಾಣೆ ತನ್ನ ವಿಶೇಷತೆಯಿಂದಲೇ ಇಡೀ ದೇಶದ ಗಮನ ಸೆಳೆದಿದೆ.

ಕಾಲು ಪೊಲೀಸ್ ಠಾಣೆಯಲ್ಲಿ FIR ದಾಖಲಿಸುವ ಪ್ರಮಾಣದಲ್ಲೂ ವರ್ಷದಿಂದ ವರ್ಷಕ್ಕೆ ಗಮನಾರ್ಹ ಇಳಿಕೆ ಕಂಡು ಬರುತ್ತಿದೆ. 2014ರಲ್ಲಿ 74 FIRಗಳು ದಾಖಲಾಗಿದ್ದರೆ, ಈ ವರ್ಷ ಕೇವಲ 37 FIR ಅರ್ಜಿ ದಾಖಲಾಗಿವೆ. ಅಷ್ಟೇ ಅಲ್ಲ ಈ ಠಾಣೆಯ ಅಧಿಕಾರ ವ್ಯಾಪ್ತಿಯಲ್ಲಿ ಅಪರಾಧ ಪ್ರಮಾಣವೂ ಇಳಿಕೆ ಕಂಡಿದೆ.

ಇದುವರಗೂ ಕೇವಲ 4 ಪ್ರಕರಣಗಳನ್ನಷ್ಟೇ ಈ ಠಾಣೆ ಬೇಧಿಸಿಲ್ಲ ಎಂಬುದು ವಿಶೇಷ. ಒಟ್ಟು 5 ಠಾಣಾಧಿಕಾರಿಗಳು ಇಲ್ಲಿ ಸೇವೆ ಸಲ್ಲಿಸಿದ್ದು, ಪ್ರತಿಯೊಬ್ಬರೂ ಈ ಠಾಣೆ ಪ್ರಸಿದ್ಧಿ ಪಡೆಯಲು ಕಾರಣೀಭೂತರಾಗಿದ್ದಾರೆ ಅಂತಾರೆ ಬಿಕನೇರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಮೋಹನ್ ಶರ್ಮಾ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ ಮುಸ್ಲಿಂ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!