ಭದ್ರಾವತಿ ಕಾರ್ಖಾನೆಯಲ್ಲಿ ಕಾರ್ಮಿಕರ ಮುಷ್ಕರ

Published : Apr 11, 2017, 01:01 PM ISTUpdated : Apr 11, 2018, 01:07 PM IST
ಭದ್ರಾವತಿ ಕಾರ್ಖಾನೆಯಲ್ಲಿ ಕಾರ್ಮಿಕರ ಮುಷ್ಕರ

ಸಾರಾಂಶ

ಗುತ್ತಿಗೆ ಮತ್ತು ಕಾಯಂ ನೌಕರರು ಸೇರಿ ಎಲ್ಲ ನೌಕರರು ಭದ್ರಾವತಿ, ದುರ್ಗಾಪುರ ಹಾಗೂ ಸೇಲಂ ಉಕ್ಕು ಕಾರ್ಖಾನೆಯಲ್ಲಿ 1 ದಿನದ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಈ ಘಟಕಗಳಲ್ಲಿ ಕೆಲಸ ಸ್ತಬ್ಧವಾಗಿತ್ತು ಎಂದು ಸಿಐಟಿಯು ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ತಿಳಿಸಿದ್ದಾರೆ.

ನವದೆಹಲಿ(ಏ.11): ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸೇರಿ ದೇಶದ 3 ಸರ್ಕಾರಿ ಸ್ವಾಮ್ಯದ ಉಕ್ಕು ಕಾರ್ಖಾನೆಯಲ್ಲಿನ ಬಂಡವಾಳ ಹಿಂತೆಗೆತ ಪ್ರಕ್ರಿಯೆ ವಿರೋಸಿ ಮಂಗಳವಾರ ನೌಕರರು ಒಂದು ದಿನದ ಮುಷ್ಕರ ನಡೆಸಿದರು.

ಗುತ್ತಿಗೆ ಮತ್ತು ಕಾಯಂ ನೌಕರರು ಸೇರಿ ಎಲ್ಲ ನೌಕರರು ಭದ್ರಾವತಿ, ದುರ್ಗಾಪುರ ಹಾಗೂ ಸೇಲಂ ಉಕ್ಕು ಕಾರ್ಖಾನೆಯಲ್ಲಿ 1 ದಿನದ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಈ ಘಟಕಗಳಲ್ಲಿ ಕೆಲಸ ಸ್ತಬ್ಧವಾಗಿತ್ತು ಎಂದು ಸಿಐಟಿಯು ಕಾರ್ಮಿಕ ಸಂಘಟನೆ ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ತಿಳಿಸಿದ್ದಾರೆ.

ಭದ್ರಾವತಿ ಕಾರ್ಖಾನೆಯಲ್ಲಿ ಕಬ್ಬಿಣದ ಅದಿರು ಕೊರತೆ ಕಾರಣ ಈಗಾಗಲೇ 1 ವಾರದಿಂದ ಕೆಲಸ ನಿಂತಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಉಕ್ಕು ಪ್ರಾಕಾರದ ಅಕಾರಿಯೊಬ್ಬರ ಪ್ರಕಾರ ಹಾಜರಾತಿ ಪ್ರಮಾಣ ಮೂರೂ ಕಾರ್ಖಾನೆಗಳಲ್ಲಿ ಶೇ.50ರಷ್ಟಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?