
ಬಳ್ಳಾರಿ (ಫೆ.14): ವಿಜಯನಗರ ಶ್ರಿ ಕೃಷ್ಣದೇವರಾಯ ವಿವಿ (ವಿಎಸ್ ಕೆ) ವ್ಯಾಪ್ತಿಯ ನಕಲಿ ಅಂಕಪಟ್ಟಿ ನೀಡಿ 600 ವಿದ್ಯಾರ್ಥಿಗಳ ಪ್ರವೇಶ ರದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯ ಆಡಳಿತ ಮಂಡಳಿ, ವಿದ್ಯಾರ್ಥಿ ಸಂಘಟನೆಯ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ವಿದ್ಯಾರ್ಥಿ ಮುಖಂಡರು ಮತ್ತು ಕುಲಪತಿ ನಡುವೆ ವಾಗ್ವಾದ ನಡೆದಿದೆ.
ವಿದ್ಯಾರ್ಥಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲು ಮಾಡದಿರಲು ವಿದ್ಯಾರ್ಥಿ ಸಂಘಟನೆಯ ಮುಖಂಡರು ಆಗ್ರಹಿಸಿದ್ದು ಮಾನವೀಯತೆಯ ಆಧಾರದ ಮೇಲೆ ಕೇಸ್ ಹಾಕದಿರಲು ಮನವಿ ಮಾಡಿದ್ದಾರೆ.
ನಕಲಿ ಅಂಕಪಟ್ಟಿ ನೀಡಿ ಪದವಿ ಪ್ರವೇಶ ಪಡೆದ 600ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಬದಲು ಡಿಪ್ಲೊಮಾ ಪ್ರಮಾಣ ಪತ್ರ ನೀಡಲು ವಿವಿ ನಿರ್ಧಾರಿಸಿದೆ.
ರಾಜ್ಯದ ಪಿಯು ಬೋರ್ಡ್ ಹೊರತುಪಡಿಸಿ ಬೇರೆ ಬೋರ್ಡ್ ಅಂಕಪಟ್ಟಿ ಸ್ವೀಕರಿಸದಿರಲು ವಿವಿ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಂಡಿದೆ.
ವಿವಿಯ ಆಡಳಿತ ಮಂಡಳಿ, ಎಸ್ಎಫ್ಐ, ಎನ್ಎಸ್ಯುಐ, ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.