ರಾಜ್ಯಸಭೆಗೆ ಎಚ್.ಡಿ ದೇವೇಗೌಡರು?

Published : May 29, 2019, 09:36 AM IST
ರಾಜ್ಯಸಭೆಗೆ ಎಚ್.ಡಿ ದೇವೇಗೌಡರು?

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ಎಚ್.ಡಿ.ದೇವೇಗೌಡರು ರಾಜ್ಯಸಭೆಗೆ ಪ್ರವೇಶಿಸ್ತಾರಾ..?

ಬೆಂಗಳೂರು :  ರಾಜ್ಯದ ಹಿತದೃಷ್ಟಿಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು ಎಂದು ಒಕ್ಕಲಿಗರ ಜಾಗೃತಿ ವೇದಿಕೆ ಒತ್ತಾಯಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಎ.ಸಿ.ಗಂಗಾಧರ, ಕಳೆದ ಆರು ದಶಕಗಳಿಂದ ದೇವೇಗೌಡ ಅವರು ರಾಜ್ಯದ ಜತೆಗೆ ದೇಶದ ಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಗಾಧ ರಾಜಕೀಯ ಅನುಭವ ಅವರಿಗಿದೆ. ಅಂತಹ ಹಿರಿಯ ರಾಜಕೀಯ ಮುತ್ಸದ್ಧಿಯ ಸೋಲು ದೇಶಕ್ಕೆ ದೊಡ್ಡ ನಷ್ಟ. ಹೇಮಾವತಿ, ಕಾವೇರಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಧಾನಸಭೆ, ಲೋಕಸಭೆ ಅನೇಕ ಬಾರಿ ಆಯ್ಕೆಗೊಂಡ ಅನುಭವ ಅವರಿಗಿದ್ದು, ತುಮಕೂರು ಕ್ಷೇತ್ರದ ಜನತೆ ಅವರನ್ನು ಪರಾಭವಗೊಳಿಸಿರುವುದು ನೋವು ತಂದಿದೆ ಎಂದು ಹೇಳಿದರು.

ರಾಜ್ಯ ರಾಜಕೀಯ ಇತಿಹಾಸದಲ್ಲಿ ದೆಹಲಿ ಮಟ್ಟದಲ್ಲಿ ಯಾವೊಬ್ಬ ಸಂಸದರು ಲೋಕಸಭೆಯಲ್ಲಿ ಮಾತನಾಡುವ ಆತ್ಮಸ್ಥೈರ್ಯ ಹೊಂದಿರುವುದಿಲ್ಲ. ಕಾವೇರಿ ಸಮಸ್ಯೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ದನಿ ಎತ್ತಿ ಮಾತನಾಡುವ ದೇವೆಗೌಡರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಬೇಕೆಂದು ಅವರು ಕಾಂಗ್ರೆಸ್‌ ವರಿಷ್ಠರಿಗೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು