ನಾನು ಮಾಡಿದ ತಪ್ಪನ್ನು ಕ್ಷಮಿಸಿ ಎಂದು ಎಚ್’ಡಿಕೆ ಜನರ ಬಳಿ ಕೇಳಿದ್ದೇಕೆ..?

Published : Feb 26, 2018, 09:38 AM ISTUpdated : Apr 11, 2018, 12:41 PM IST
ನಾನು ಮಾಡಿದ ತಪ್ಪನ್ನು ಕ್ಷಮಿಸಿ ಎಂದು ಎಚ್’ಡಿಕೆ ಜನರ ಬಳಿ ಕೇಳಿದ್ದೇಕೆ..?

ಸಾರಾಂಶ

‘ನಾನು ಹಿಂದೆ ಮಾಡಿರುವ ತಪ್ಪನ್ನು ಮನ್ನಿಸಿ ಈ ಬಾರಿ ನನಗೆ ಐದು ವರ್ಷ ಅಧಿಕಾರ ಕೊಡಿ. ನಾನು ಏನು ಅಂತ ಸಾಬೀತುಪಡಿಸುವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು : ‘ನಾನು ಹಿಂದೆ ಮಾಡಿರುವ ತಪ್ಪನ್ನು ಮನ್ನಿಸಿ ಈ ಬಾರಿ ನನಗೆ ಐದು ವರ್ಷ ಅಧಿಕಾರ ಕೊಡಿ. ನಾನು ಏನು ಅಂತ ಸಾಬೀತುಪಡಿಸುವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಇಲ್ಲಿ ತಾಲೂಕು ಜೆಡಿಎಸ್ ಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ 6 ತಿಂಗಳು ಕಾಲಾವಕಾಶ ನೀಡಿ. ಇಡೀ ರಾಜ್ಯದ ಜನತೆ ನೆಮ್ಮದಿಯ ಬದುಕು ಕಟ್ಟಿಕೊಳ್ಳುವ ಹಾಗೆ ಮಾಡುತ್ತೇನೆ ಎಂದರು.

ಇಸ್ರೇಲ್ ಮಾದರಿಯ ಕೃಷಿಯನ್ನು ರೈತರಿಗೆ ಪರಿಚಯಿಸಿ ಯುವಕರಿಗೆ ಅವರ ಊರಲ್ಲಿಯೇ ಉದ್ಯೋಗ ಸೃಷ್ಟಿಸುತ್ತೇನೆ ಎಂದ ಎಚ್‌ಡಿಕೆ, ಕ್ಷೇತ್ರದಲ್ಲಿ ಎನ್.ಟಿ. ಬೊಮ್ಮಣ್ಣ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಸ್ವತಂತ್ರವಾಗಿ ಆಡಳಿತ ನಡೆಸುವ ಅವಕಾಶ ಮಾಡಿಕೊಡುವಂತೆ ಕೈ ಮುಗಿದು ಕೇಳಿಕೊಂಡರು.

ಬಿಜೆಪಿ ಮತ್ತು ಕಾಂಗ್ರೆಸ್ ಪರ್ಸೆಂಟೇಜ್ ಪಕ್ಷಗಳಾಗಿದ್ದು, ರೈತರ ಬಗ್ಗೆ ಅವುಗಳಿಗೆ ಕಾಳಜಿ ಇಲ್ಲ. ನಾನು ಮುಖ್ಯಮಂತ್ರಿ ಯಾಗಿದ್ದಾಗ ಗ್ರಾಮವಾಸ್ತವ್ಯ ಮಾಡುವುದರ ಮೂಲಕ ರೈತರ ಸಮಸ್ಯೆ ಅರಿತಿದ್ದೇನೆ. ಹೀಗಾಗಿಯೇ ರೈತರು ಕೇಳದಿದ್ದರೂ ಅವರ ಸಾಲ ಮನ್ನಾ ಮಾಡಿದೆ ಎಂದ ಕುಮಾರಸ್ವಾಮಿ, ಅನ್ನಭಾಗ್ಯವನ್ನು ಉಚಿತವಾಗಿ ಕೊಟ್ಟಿದ್ದೇನೆ ಎಂದು ಜನರನ್ನು ಸಿದ್ದರಾಮಯ್ಯ ಮರುಳು ಮಾಡುತ್ತಿದ್ದಾರೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ
ಗ್ಯಾರಂಟಿಯಿಂದಾಗಿ ತಲಾ ಆದಾಯದಲ್ಲಿ ರಾಜ್ಯ ನಂ.1 : ಸಿದ್ದರಾಮಯ್ಯ