
ಮಂಡ್ಯ(ಅ.23): ಮಂಡ್ಯ ಲೋಕಸಭಾ ಉಪಚುನಾವಣೆ ಸಂಬಂಧ ಮಂಗಳವಾರ ನಡೆಯಲಿರುವ ಚುನಾವಣಾ ತರಬೇತಿಗೆ ಬರುವ ಅಧಿಕಾರಿಗಳು ಮತದಾರರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರಬೇಕು.
ರಜೆಯಲ್ಲಿರುವ ಸರ್ಕಾರಿ, ಅರೆ ಸರ್ಕಾರಿ ನೌಕರರು ಹಾಗೂ ತರಬೇತಿಗೆ ನಿಯೋಜನೆಗೊಂಡಿರುವ ಇತರೆ ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಯ ಮುಖ್ಯಸ್ಥರನ್ನು ಸಂಪರ್ಕಿಸಿ ಚುನಾವಣೆಗೆ ನಿಯೋಜಿಸಿರುವ ಆದೇಶವನ್ನು ಪಡೆದುಕೊಂಡು ತಾವು ಒಳಪಡುವ ವಿಧಾನ ಸಭಾ ಕ್ಷೇತ್ರ, ಮತಗಟ್ಟೆ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯ ಮಾಹಿತಿಯನ್ನು ತರಬೇತಿಗೆ ತಪ್ಪದೆ ತರಬೇಕು.
ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಜನತಾ ಪ್ರಾತಿನಿಧ್ಯ ಅಧಿನಿಯಮ 1951ರ 134ನೇ ಪ್ರಕರಣದ ಮೇಲೆ ಕಾನೂನು ರೀತ್ಯಾ ಸೂಕ್ತ ಕ್ರಮ ವಹಿಸಲಾಗುವುದು ಎಂದು ಚುನಾವಣಾಧಿಕಾರಿ ಎನ್. ಮಂಜುಶ್ರೀ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.