
ನವದೆಹಲಿ (ಜ.03): ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕ್ಯಾಪ್ಟರ್ ಹಗರಣದ ಉರುಳು ವಿಐಪಿಗಳನ್ನು ಮಾತ್ರವಲ್ಲ ಕೆಲ ಪತ್ರಕರ್ತರ ಕೊರಳಿಗೂ ಸುತ್ತಿಕೊಂಡಿದೆ. ಆಗಸ್ಟಾ ವೆಸ್ಟ್ ಲ್ಯಾಂಡ್ ಪರವಾಗಿ ವರದಿ ಮಾಡಿದ ಕೆಲ ಪತ್ರಕರ್ತರ ವಿರುದ್ದ ವಿಶೇಷ ತನಿಖಾ ತಂಡ ಸಲ್ಲಿಸಿದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
ಆಗಸ್ಟಾ ವೆಸ್ಟ್ ಲ್ಯಾಂಡ್ ಒಪ್ಪಂದದ ಪರವಾಗಿ ಬರೆಯಲು ಪತ್ರಕರ್ತರು 50 ಕೋಟಿ ಹಣವನ್ನು ಪಡೆದಿದ್ದರು ಎನ್ನುವ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಯಿಂದ ಪ್ರತಿಕ್ರಿಯೆ ಕೇಳಿದೆ.
ನ್ಯಾ.ದೀಪಕ್ ಮಿಶ್ರಾ ಮತ್ತು ಅರುಣ್ ಮಿಶ್ರಾ ನ್ಯಾಯಪೀಠ ಪತ್ರಕರ್ತರ ವಿರುದ್ದ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿದೆ. ಈ ಹಗರಣದಲ್ಲಿ ಮಾಧ್ಯಮದ ಪಾತ್ರವಿದೆಯಾ ಇಲ್ಲವಾ ಎಂಬುದರ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗೆ ವರದಿ ನೀಡುವಂತೆ ಕೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.