
ಬೆಂಗಳೂರು[ಆ.03]: ಉಪ ಚುನಾವಣೆ ವಿಚಾರವಾಗಿ ಈಗಲೇ ಏನೂ ಹೇಳಲಾಗದು. ಅನರ್ಹಗೊಂಡ ಶಾಸಕರಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಏನು ತೀರ್ಪು ನೀಡುತ್ತೆ ಕಾದು ನೋಡೋಣ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ
ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು, ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹಾಗಾಗಿ ನ್ಯಾಯಾಲಯ ತೀರ್ಪು ಏನಾಗಲಿದೆ ಎಂಬುದು ನೋಡಬೇಕು, ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಬೇಕು. ಆ ನಂತರ ಚಿಕ್ಕಬಳ್ಳಾಪುರ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡಬಹುದು ಎಂದು ಹೇಳಿದರು.
ಈ ಮಧ್ಯೆ, ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ನಿರ್ಧಾರ ಸಂವಿಧಾನ ಬಾಹಿರ ಎಂಬ ಬಿಜೆಪಿ ಮುಖಂಡ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿದ ರಮೇಶ್ ಕುಮಾರ್, ಸಂವಿಧಾನದ ಬಗ್ಗೆ ಈಶ್ವರಪ್ಪ ನವರಿಗೆ ತಿಳಿದಿರುವಷ್ಟು ನನಗೆ ಗೊತ್ತಿಲ್ಲ.
ಶಾಸಕರು ಆ ರೀತಿ ನಡೆದುಕೊಂಡರು, ಸಂವಿಧಾನದಲ್ಲಿ ಅವಕಾಶವಿತ್ತು. ಹಾಗಾಗಿ ಆ ಸ್ಥಾನದಲ್ಲಿ ಕುಳಿತು ಅವರನ್ನು ಅನರ್ಹ ಮಾಡಿದ್ದೇನೆ. ಈ ವಿಚಾರ ಈಗ ಚರ್ಚೆ ಮಾಡುವುದು ಸಮಂಜಸವಲ್ಲ ಎಂದರು
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಪ್ರಭಾವಿ ನಾಯಕರಾಗಿದ್ದು, ದೇವರಾಜು ಅರಸು ಅವರ ನಂತರ ಹೆಚ್ಚಿನ ಖ್ಯಾತಿ ಪಡೆದ ಪ್ರಮುಖರಾಗಿದ್ದಾರೆ. ಹಾಗಾಗಿ ಅವರ ನಾಯಕತ್ವದಲ್ಲೇ ಕಾಂಗ್ರೆಸ್ ಸಂಘಟಿಸಲಾಗುವುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.