ಮಹಾಶಿವರಾತ್ರಿ ವೇಳೆ ಉಗ್ರ ದಾಳಿ: ದ್ವಾದಶ ಜ್ಯೋತಿರ್ಲಿಂಗಗಳ ಮೇಲೆ ಕಣ್ಣು

Published : Feb 13, 2018, 08:20 AM ISTUpdated : Apr 11, 2018, 01:01 PM IST
ಮಹಾಶಿವರಾತ್ರಿ ವೇಳೆ ಉಗ್ರ ದಾಳಿ: ದ್ವಾದಶ ಜ್ಯೋತಿರ್ಲಿಂಗಗಳ ಮೇಲೆ ಕಣ್ಣು

ಸಾರಾಂಶ

ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಆಚರಿಸಲ್ಪಡುವ ಮಹಾಶಿವರಾತ್ರಿ ಹಬ್ಬದ ವೇಳೆ ಶಿವ ದೇಗುಲಗಳ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ. ಈ ಕಾರಣ, ಭದ್ರತೆ ಬಿಗಿಗೊಳಿಸಬೇಕು ಎಂದು ಗುಪ್ತಚರ ಇಲಾಖೆಯು ಸರ್ಕಾರಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

ನವದೆಹಲಿ : ಮಂಗಳವಾರ ಹಾಗೂ ಬುಧವಾರ ದೇಶಾದ್ಯಂತ ಆಚರಿಸಲ್ಪಡುವ ಮಹಾಶಿವರಾತ್ರಿ ಹಬ್ಬದ ವೇಳೆ ಶಿವ ದೇಗುಲಗಳ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ. ಈ ಕಾರಣ, ಭದ್ರತೆ ಬಿಗಿಗೊಳಿಸಬೇಕು ಎಂದು ಗುಪ್ತಚರ ಇಲಾಖೆಯು ಸರ್ಕಾರಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಭಯೋತ್ಪಾದಕರು ವಿಶೇಷವಾಗಿ ದ್ವಾದಶ ಜ್ಯೋತಿರ್ಲಿಂಗಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ನಾಸಿಕ್‌ನ ತ್ರ್ಯಂಬಕೇಶ್ವರ ದೇವಾಲಯದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಂಜಾಬ್‌, ಹರ್ಯಾಣ, ಜಮ್ಮು, ಉತ್ತರಪ್ರದೇಶ, ರಾಜಸ್ಥಾನ, ಗುಜರಾತ್‌ ಹಾಗೂ ಉತ್ತರಾಖಂಡಗಳ ಶಿವ ದೇವಾಲಯಗಳಿಗೆ ಭದ್ರತೆ ಕಲ್ಪಿಸಲಾಗಿದೆ.

ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ, ಮಹಾರಾಷ್ಟ್ರದ ನಾಸಿಕ್‌ನ ತ್ರ್ಯಂಬಕೇಶ್ವರ, ಪುಣೆಯ ಭೀಮಾಶಂಕರ, ಪರಳಿಯ ವೈಜನಾಥ ಹಾಗೂ ಎಲ್ಲೋರಾದ ಘೃಷ್ಣೇಶ್ವರ, ಗುಜರಾತ್‌ನ ಸೋಮನಾಥ ಹಾಗೂ ದ್ವಾರಕಾದ ನಾಗೇಶ್ವರ, ಮಧ್ಯಪ್ರದೇಶದ ಉಜ್ಜಯಿನಿ ಹಾಗೂ ಓಂಕಾರೇಶ್ವರ, ಉತ್ತರಾಖಂಡದ ಕೇದಾರನಾಥ, ಉತ್ತರಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ, ತಮಿಳುನಾಡಿನ ರಾಮೇಶ್ವರ- ಇವು ದ್ವಾದಶ ಜ್ಯೋತಿರ್ಲಿಂಗಗಳು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ