ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಸಂದೀಪ್ ಅಂತ್ಯ ಸಂಸ್ಕಾರ

By Suvarna Web DeskFirst Published Feb 1, 2017, 3:06 PM IST
Highlights

ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ ಯೋಧ ಸಂದೀಪ್ ಅಂತ್ಯಸಂಸ್ಕಾರ ದೇವಿಹಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಹಾಸನ (ಫೆ.1): ಹಿಮಪಾತ ದುರಂತದಲ್ಲಿ ಹುತಾತ್ಮರಾಗಿದ್ದ ಯೋಧ ಸಂದೀಪ್ ಅಂತ್ಯಸಂಸ್ಕಾರ ದೇವಿಹಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಇಂದು ಬೆಳಿಗ್ಗೆ ಸಂದೀಪ್ ಮನೆ ಬಳಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗಣ್ಯರು ಸೇರಿದಂತೆ ಸಾರ್ವಜನಿಕರು ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.  ಆ ಬಳಿಕ ಹಿಂದೂ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು.

 

click me!