ಹಿಂದೂ ಮನೆಗಳ ಮೇಲೆ ಪಾಕಿಸ್ತಾನಿ ಪೊಲೀಸರಿಂದ ದಾಳಿ?

Published : Jan 10, 2018, 04:53 PM ISTUpdated : Apr 11, 2018, 01:09 PM IST
ಹಿಂದೂ ಮನೆಗಳ ಮೇಲೆ ಪಾಕಿಸ್ತಾನಿ ಪೊಲೀಸರಿಂದ ದಾಳಿ?

ಸಾರಾಂಶ

ಬೆಂಗಳೂರು (ಜ.10): ಹಿಂದೂ ಕುಟುಂಬವೊಂದು ಪಾಕಿಸ್ತಾನಿ ಪೊಲೀಸರಿಂದ ಕಿರುಕುಳಕ್ಕೆ ಒಳಗಾಗಿದೆ ಎಂಬಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು (ಜ.10): ಹಿಂದೂ ಕುಟುಂಬವೊಂದು ಪಾಕಿಸ್ತಾನಿ ಪೊಲೀಸರಿಂದ ಕಿರುಕುಳಕ್ಕೆ ಒಳಗಾಗಿದೆ ಎಂಬಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಆ ವಿಡಿಯೋದ ಕೆಳಗೆ ಮುಸ್ಲಿಮರು ಹಿಂದು ಮನೆಗಳ ಮೇಲೆ ದಾಳಿ ಮಾಡಿ ಪಾಕಿಸ್ತಾನಿ ಧ್ವಜವನ್ನು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಅಡಿಬರಹವನ್ನೂ ಬರೆಯಲಾಗಿದೆ. ಆ ವಿಡಿಯೋದಲ್ಲಿ ಪೊಲೀಸರು ಮತ್ತು ಕೆಲ ವ್ಯಕ್ತಿಗಳು ಒಂದು ಮನೆಯ ಮೇಲೆ ದಾಳಿ ನಡೆಸಿ ಅಲ್ಲಿನ ನಿವಾಸಿಗಳ ಮತ್ತು ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಾರೆ. ಅದನ್ನು ಚಿತ್ರೀಕರಣ ಕೂಡ ಮಾಡಲಾಗುತ್ತಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆದರೆ ವಿಡಿಯೋದ ಅಸಲಿ ಕತೆಯೇ ಬೇರೆ. ಈ ವಿಡಿಯೋ ಈಗಿನದ್ದಲ್ಲ. ಬದಲಿಗೆ 2013 ರಲ್ಲಿ ಪಾಕಿಸ್ತಾನದ ಫೈಸಲಾಬಾದ್'ನಲ್ಲಿ ಚಿತ್ರೀಕರಿಸಲಾದ ವಿಡಿಯೋ. ಅಲ್ಲದೆ ಈ ಘಟನೆಗೆ ಕೋಮು ಘರ್ಷಣೆಗೆ ಸಂಬಂಧಿಸಿದ್ದಲ್ಲ. ದಾಳಿಗೆ ಒಳಗಾಗಿರುವವರು ತಮ್ಮ ಧರ್ಮದ ಕಾರಣದಿಂದಾಗಿ ದಾಳಿಗೆ ಒಳಗಾಗಿಲ್ಲ ಎಂದು ಪಾಕಿಸ್ತಾನದಲ್ಲಿ ಪ್ರಕಟಗೊಂಡ ಲೇಖನವೊಂದು ಸ್ಪಷ್ಟಪಡಿಸಿದೆ. ಘಟನೆಯಲ್ಲಿ ಮಹಿಳೆಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ 5 ಜನ ಪೊಲೀಸರನ್ನು ಅಮಾನತು ಮಾಡಲಾಗಿತ್ತು ಎಂದೂ ಕೂಡ ವರದಿಯಾಗಿದೆ.

2013 ರಲ್ಲಿ ಫೈಸಲಾಬಾದ್‌ನಲ್ಲಿ ಲೋಡ್‌ಶೆಡ್ಡಿಂಗ್ ವಿರುದ್ಧ ನಡೆದ ಪ್ರತಿಭಟನೆ ನಡೆಸಲಾಗಿತ್ತು. ಆಗ ಪ್ರತಿಭಟನಾಕಾರರು ದಿನಕ್ಕೆ 14-16 ಗಂಟೆ ಲೋಡ್‌'ಶೆಡ್ಡಿಂಗ್ ಮಾಡುತ್ತಿರುವುದಾಗಿ ಆರೋಪಿಸಿ ಟೈರ್ ಸುಟ್ಟು, ಕಲ್ಲುಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದರು. ಆಗ ಪೊಲೀಸರು ಪ್ರತಿಭಟನಾಕಾರರ ಮನೆಗೇ ತೆರಳಿ ಒತ್ತಾಯಪೂರ್ವಕವಾಗಿ ಮನೆಯೊಳಗೆ ನುಗ್ಗಿ ಬಂಧಿಸಿದ್ದರು. ಈ ವೇಳೆ ಮಹಿಳೆಯೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ೫ ಜನ ಪೊಲೀಸರನ್ನು ಅಮಾನತು ಮಾಡಲಾಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ