Jun 1, 2018, 7:23 PM IST
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿದ್ದರೂ, ಆರ್.ಆರ್.ನಗರ ಚುನಾವಣೆಯಲ್ಲಿ ಅವೆರೆಡು ಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸಿದ್ದವು. ನಮ್ಮ ಮೈತ್ರಿ ವಿಧಾನಸೌಧದೊಳಗೆ ಮಾತ್ರವೆಂದಿದ್ದರು ಜೆಡಿಎಸ್ ವರಿಷ್ಠ ದೇವೇಗೌಡರು. ಇದೀಗ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯಿಂದ ಬಿಜೆಪಿಯನ್ನು ಸೊಲಿಸಿದ್ದೇವೆಯೆಂದಿದ್ದಾರೆ ಎಚ್.ಡಿ. ಕುಮಾರಸ್ವಾಮಿ.