ಮಳೆಯಾಗದಿದ್ದರೆ ಕದಂಬ ನೌಕಾನೆಲೆಯಿಂದ ನೌಕೆಗಳ ಸ್ಥಳಾಂತರ

Published : Jun 06, 2019, 08:30 AM ISTUpdated : Jun 28, 2019, 08:59 PM IST
ಮಳೆಯಾಗದಿದ್ದರೆ ಕದಂಬ ನೌಕಾನೆಲೆಯಿಂದ ನೌಕೆಗಳ ಸ್ಥಳಾಂತರ

ಸಾರಾಂಶ

ಐಎನ್‌ಎಸ್‌ ಕದಂಬ ನೌಕಾನೆಲೆ ಪ್ರದೇಶದಲ್ಲಿ ಶೀಘ್ರ ಮಳೆಯಾಗಿ ನೀರಿನ ಪ್ರಮಾಣ ಹೆಚ್ಚದಿದ್ದಲ್ಲಿ ಇಲ್ಲಿ ತಂಗಿರುವ ಕೆಲ ಯುದ್ಧ ಹಡಗುಗಳನ್ನು ಮುಂಬೈ ಅಥವಾ ಗೋವಾಕ್ಕೆ ಸ್ಥಳಾಂತರಿಸುವ ಯೋಚನೆ ಮಾಡಿದೆ.

ಕಾರವಾರ: ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ಐಎನ್‌ಎಸ್‌ ಕದಂಬ ನೌಕಾನೆಲೆ ಪ್ರದೇಶದಲ್ಲಿ ಶೀಘ್ರ ಮಳೆಯಾಗಿ ನೀರಿನ ಪ್ರಮಾಣ ಹೆಚ್ಚದಿದ್ದಲ್ಲಿ ಇಲ್ಲಿ ತಂಗಿರುವ ಕೆಲ ಯುದ್ಧ ಹಡಗುಗಳನ್ನು ಮುಂಬೈ ಅಥವಾ ಗೋವಾಕ್ಕೆ ಸ್ಥಳಾಂತರಿಸುವ ಯೋಚನೆ ಮಾಡಿದೆ.

ದೇಶದ ಅತಿದೊಡ್ಡ ಏರ್‌ಕ್ರಾಪ್ಟ್‌ ಕ್ಯಾರಿಯರ್‌ ಐಎನ್‌ಎಸ್‌ ವಿಕ್ರಮಾದಿತ್ಯ ಸೇರಿದಂತೆ ಹಲವು ನೌಕೆಗಳು ಇಲ್ಲಿನ ನೌಕಾನೆಲೆಯಿಂದಲೆ ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ಈ ಯುದ್ಧ ನೌಕೆಗಳಲ್ಲಿ ನೀರಿನ ಅಗತ್ಯತೆ ಹೆಚ್ಚಿದೆ. ಯುದ್ಧ ನೌಕೆಗಳಿಗೆ ಅಗತ್ಯ ಪ್ರಮಾಣದ ನೀರನ್ನು ಪೂರೈಕೆ ಮಾಡಲು ಸಾಧ್ಯವಾಗದಂತಾಗಿದೆ.

ಏಕೆಂದರೆ ಗಂಗಾವಳಿ ನದಿಯಿಂದ ಹೊನ್ನಳ್ಳಿ ಬಳಿ ಜಲಮಂಡಳಿ ನೀರನ್ನು ಎತ್ತಿ ಕಾರವಾರ, ಅಂಕೋಲಾ, ಐಎನ್‌ಎಸ್‌ ಕದಂಬ ನೌಕಾನೆಲೆ ಹಾಗೂ ಗ್ರಾಸಿಮ್‌ ಇಂಡಸ್ಟ್ರಿಗಳಿಗೆ ಪೂರೈಕೆ ಮಾಡುತ್ತಿದೆ. ಆದರೆ, ಗಂಗಾವಳಿ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ಹೀಗಾಗಿ ಜಲ ಮಂಡಳಿಯಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಜಲ ಮಂಡಳಿಯ ನೀರನ್ನೇ ಅವಲಂಬಿಸಿದ್ದ ನೌಕಾನೆಲೆ ಈಗ ನೀರಿಗಾಗಿ ಸ್ಥಳೀಯ ಬೋರ್‌ವೆಲ್‌, ಬಾವಿಗಳನ್ನು ಹುಡುಕಾಡುತ್ತಿದೆ. ಯುದ್ಧ ನೌಕೆಯ ಜತೆ ನೌಕಾನೆಲೆಯ ಅಧಿಕಾರಿಗಳು, ಸಿಬ್ಬಂದಿ ಮನೆಗಳಿಗೂ ನೀರಿನ ಸಮಸ್ಯೆ ಎದುರಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!