ಮೆಟ್ಟೂರು ಡ್ಯಾಂಗೆ 2.30 ಲಕ್ಷ ಕ್ಯುಸೆಕ್‌ ಒಳಹರಿವು ದಾಖಲು

Published : Aug 14, 2019, 11:21 AM IST
ಮೆಟ್ಟೂರು ಡ್ಯಾಂಗೆ  2.30 ಲಕ್ಷ ಕ್ಯುಸೆಕ್‌  ಒಳಹರಿವು ದಾಖಲು

ಸಾರಾಂಶ

ಕರ್ನಾಟಕದ ಅಣೆಕಟ್ಟುಗಳಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 12 ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ಮೆಟ್ಟೂರು ಜಲಾಶಯಕ್ಕೆ ಬರುವ ನೀರಿನಲ್ಲಿ ಭಾರೀ ಏರಿಕೆಯಾಗಿದೆ. 

ಚೆನ್ನೈ (ಆ. 14): ಕರ್ನಾಟಕದ ಅಣೆಕಟ್ಟುಗಳಿಂದ ಭಾರೀ ಪ್ರಮಾಣದ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 12 ಜಿಲ್ಲೆಗಳಿಗೆ ನೀರಾವರಿ ಮತ್ತು ಕುಡಿಯುವ ನೀರು ಪೂರೈಸುವ ಮೆಟ್ಟೂರು ಜಲಾಶಯಕ್ಕೆ ಬರುವ ನೀರಿನಲ್ಲಿ ಭಾರೀ ಏರಿಕೆಯಾಗಿದೆ.

ದೇವರ ನಾಡಲ್ಲಿ ನಿಲ್ಲದ ಮಳೆ: 5 ಜಿಲ್ಲೆ​ಗ​ಳಲ್ಲಿ ಮತ್ತೆ ರೆಡ್‌ ಅಲ​ರ್ಟ್‌!

ಮಂಗಳವಾರ ಸಂಜೆ ವೇಳೆಗೆ ಜಲಾಶಯಕ್ಕೆ 2.30 ಲಕ್ಷ ಕ್ಯುಸೆಕ್‌ ನೀರಿನ ಒಳ ಹರಿವು ಇತ್ತು. 4 ದಿನಗಳ ಹಿಂದೆ ಅಣೆಕಟ್ಟಿನಲ್ಲಿ 57 ಅಡಿ ಸಂಗ್ರಹವಾಗಿತ್ತು, ಆದರೆ ಮಂಗಳವಾರ ಅದು 101 ಅಡಿಗೆ ಏರಿದೆ. ಈ ನಡುವೆ ಒಳ ಹರಿವಿನ ಪ್ರಮಾಣ ಹೆಚ್ಚಿರುವ ಕಾರಣಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಮಂಗಳವಾರ ಬೆಳಗ್ಗೆ ಮೆಟ್ಟೂರು ಅಣೆಕಟ್ಟಿನಿಂದ ರೈತರ ಜಮೀನುಗಳಿಗೆ ನೀರು ಹರಿಸಿದರು.

ರಾಜ್ಯದೆಲ್ಲೆಡೆ ಮಳೆ, ಪ್ರವಾಹ ಇಳಿಮುಖ

ಮೊದಲಿಗೆ 3000 ಕ್ಯೂಸೆಕ್‌ನಷ್ಟುನೀರನ್ನು ಡ್ಯಾಂನಿಂದ ಹೊರಬಿಡಲಾಯಿತು. ಸಂಜೆ ಹೊತ್ತಿಗೆ 10000 ಕ್ಯೂಸೆಕ್‌ ನೀರನ್ನು ರೈತರ ಜಮೀನುಗಳಿಗೆ ಪೂರೈಕೆ ಮಾಡಲಾಗಿದೆ. ಅಲ್ಲದೆ, ನೀರಾವರಿ ಪ್ರದೇಶಗಳಿಗೆ ಅಗತ್ಯವಿರುವಷ್ಟುನೀರನ್ನು ಮುಂದಿನ ದಿನಗಳಲ್ಲಿ ಬಿಡಲಾಗುತ್ತದೆ ಎಂದು ಸಿಎಂ ಪಳನಿಸ್ವಾಮಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!