ಜಯಲಲಿತಾ ಆರೋಗ್ಯ ಸ್ಥಿತಿ ಬಗ್ಗೆ ಸುಳ್ಳು ಹೇಳಿದ್ದೇವೆ; ಕ್ಷಮೆಯಾಚಿಸಿದ ಸಚಿವ

Published : Sep 23, 2017, 05:02 PM ISTUpdated : Apr 11, 2018, 12:43 PM IST
ಜಯಲಲಿತಾ ಆರೋಗ್ಯ  ಸ್ಥಿತಿ ಬಗ್ಗೆ ಸುಳ್ಳು ಹೇಳಿದ್ದೇವೆ; ಕ್ಷಮೆಯಾಚಿಸಿದ  ಸಚಿವ

ಸಾರಾಂಶ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಅವರ ಆರೋಗ್ಯ ಸ್ಥಿತಿ ಬಗ್ಗೆ ಸುಳ್ಳು ಹೇಳಿದ್ದಕ್ಕಾಗಿ ತಮಿಳುನಾಡು ಅರಣ್ಯ ಸಚಿವ ಸಿ ಶ್ರೀನಿವಾಸನ್ ಜನರ ಕ್ಷಮೆ ಕೋರಿದ್ದಾರೆ.

ನವದೆಹಲಿ (ಸೆ.23): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಅವರ ಆರೋಗ್ಯ ಸ್ಥಿತಿ ಬಗ್ಗೆ ಸುಳ್ಳು ಹೇಳಿದ್ದಕ್ಕಾಗಿ ತಮಿಳುನಾಡು ಅರಣ್ಯ ಸಚಿವ ಸಿ ಶ್ರೀನಿವಾಸನ್ ಜನರ ಕ್ಷಮೆ ಕೋರಿದ್ದಾರೆ.

ಜಯಲಿಲತಾ ಆರೋಗ್ಯ ಸ್ಥಿತಿ ಹದಗೆಟ್ಟಿದ್ದಾಗ ಅವರು ಎಐಎಡಿಎಂಕೆ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ, ಇಡ್ಲಿ ತಿನ್ನುತ್ತಿದ್ದಾರೆ ಅಂತೆಲ್ಲಾ ಸುಳ್ಳು ಹೇಳಿದ್ದೇವೆ. ಎಐಎಡಿಎಂಕೆ ನಾಯಕರು ಸುಳ್ಳು ಹೇಳಿದ್ದಾರೆ. ಸತ್ಯ ಏನಂದರೆ ಯಾರೊಬ್ಬರೂ ಅವರನ್ನು ನೋಡಿಲ್ಲ. ಸುಳ್ಳು ಹೇಳಿದ್ದಕ್ಕಾಗಿ ಜನರ ಕ್ಷಮೆ ಕೋರುತ್ತಿದ್ದೇನೆ ಎಂದು ಶ್ರೀನಿವಾಸನ್ ಹೇಳಿದ್ದಾರೆ.

ಯಾವೊಬ್ಬ ಎಐಎಡಿಎಂಕೆ ನಾಯಕರು ಜಯಲಲಿತಾರನ್ನು ಭೇಟಿ ಮಾಡಿಲ್ಲ. ಅಪೋಲೋ ಆಸ್ಪತ್ರೆಯ ಮುಖ್ಯಸ್ಥ ಪ್ರತಾಪ್ ರೆಡ್ಡಿ ರೂಮಿನಲ್ಲಿ ಕುಳಿತಿರುತ್ತಿದ್ದರು. ಪಕ್ಷದ ಸೀಕ್ರೆಟ್ ಸೋರಿಕೆಯಾಗಬಾರದೆಂದು ನಾವು ಸುಳ್ಳು ಹೇಳಿದ್ದೇವೆ ಎಂದು ಶ್ರೀನಿವಾಸ್ ಹೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ