
ಬೆಂಗಳೂರು: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದು ನೋಡುತ್ತಿದ್ದೇವೆ. ಒಂದು ವೇಳೆ ರಾಜೀನಾಮೆ ನೀಡದಿದ್ದರೆ ಮುಂದಿನ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಭಾನುವಾರ ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಬಹುಮತ ಇಲ್ಲದಿದ್ದರೂ ಅಪವಿತ್ರ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿವೆ. ಇದೀಗ ಲೋಕಸಭಾ ಚುನಾವಣೆ ಯಲ್ಲಿ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದರು.
ಸರ್ಕಾರದ ಭವಿಷ್ಯ ನಿಂಬೆಹಣ್ಣು ಹೇಳಬೇಕು!: ಸಮ್ಮಿಶ್ರ ಸರ್ಕಾರದ ಭವಿಷ್ಯವನ್ನು ನಿಂಬೆ ಹಣ್ಣು ಹೇಳಬೇಕು ಎಂದು ಬಿಜೆಪಿ ನಾಯಕ ಆರ್.ಅಶೋಕ್ ವ್ಯಂಗ್ಯವಾಗಿ ಹೇಳಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಕೈಯಲ್ಲಿ ನಿಂಬೆ ಹಣ್ಣು ಹಿಡಿದು ತೋರಿಸಿದ ಅವರು, ಸರ್ಕಾರದ ಅಸ್ತಿತ್ವದ ಬಗ್ಗೆ ಸಚಿವ ಎಚ್.ಡಿ.ರೇವಣ್ಣ ಮತ್ತವರ ನಿಂಬೆ ಹಣ್ಣು ಹೇಳಬೇಕು ಎಂದು ಲೇವಡಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.