
ಬೆಂಗಳೂರು [ಮೇ 26] : ಇಂದು ಸಂಜೆ ದೆಹಲಿಗೆ ತೆರಳಿ ಅಲ್ಲಿ ಸಚಿವರ ಆಯ್ಕೆ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಹೈ ಕಮಾಂಡ್ ಜೊತೆಗೆ ಚರ್ಚೆ ನಡೆಸುವುದಾಗಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೆಹಲಿಗೆ ಬರುವುದಿಲ್ಲ. ಆದರೆ ಜೆಡಿಎಸ್ ನಲ್ಲಿ ಯಾರು ಸಚಿವರಾಗಬೇಕು ಎನ್ನುವುದನ್ನು ಅವರೇ ಪಟ್ಟಿ ಮಾಡಲಿದ್ದಾರೆ ಎಂದಿದ್ದಾರೆ.
ಇನ್ನು ಸಚಿವರ ಆಯ್ಕೆಯಲ್ಲಿ ಯಾವ ಮಾನದಂಡ ಅನುಸರಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸಲಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ದೆಹಲಿಯಲ್ಲಿ ಚರ್ಚೆಯಾಗಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ.
ಇನ್ನು ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ರಾಜ್ಯದಲ್ಲಿ ಬಂದ್ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ. ಅವರ ಎಚ್ಚರಿಕೆಯನ್ನು ನಾವು ಎದುರಿಸಲಿದ್ದೇವೆ ಎಂದು ಇದೇ ವೇಳೆ ಪರಮೇಶ್ವರ್ ಅವರು ಸವಾಲು ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.