3 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ

Published : Mar 11, 2017, 01:19 PM ISTUpdated : Apr 11, 2018, 01:11 PM IST
3 ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ

ಸಾರಾಂಶ

ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿರುವುದು ದೇಶದ ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ನವದೆಹಲಿ (ಮಾ.11): ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿರುವುದು ದೇಶದ ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ ಮುಕ್ತ ಭಾರತವನ್ನು ಸ್ಥಾಪಿಸುವುದಾಗಿ ಮಾತನಾಡುವವರಿಗೆ ಈ ಗೆಲುವು ದೊಡ್ಡ ಸೋಲಾಗಿದೆ. ಕಾಂಗ್ರೆಸ್ ದೇಶದ ಹೃದಯ ಭಾಗದಲ್ಲಿದೆ. ಯಾವಾಗಲೂ ಇದ್ದೇ ಇರುತ್ತದೆ. ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ.  

ುತ್ತರ ಪ್ರದೇಶ ಹಾಗೂ ಉತ್ತರಖಂಡದಲ್ಲಿ  ಹೀನಾಯವಾಗಿ ಸೋತಿರುವುದನ್ನು ಒಪ್ಪಿಕೊಂಡ ಕಾಂಗ್ರೆಸ್ ಸೋಲಿಗೆ ಕಾರಣಗಳನ್ನು ಅವಲೋಕಿಸಬೇಕು ಎಂದಿದ್ದಾರೆ.

ಉತ್ತರ ಪ್ರದೇಶ ಅಭಿವೃದ್ದಿಗಾಗಿ ಕಾಂಗ್ರೆಸ್-ಎಸ್ಪಿ ಕೈಜೋಡಿಸಿತು.  ಆದರೆ ಜನರು ಇದನ್ನು ಒಪ್ಪಲಿಲ್ಲ. ೀ ಸೋಲನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೇರೆ ರಾಜ್ಯಗಳಲ್ಲಿ ಗೆದ್ದಿರುವ ಬಗ್ಗೆ ಖುಷಿಯಿದೆ.  ಕೆಲವೊಮ್ಮೆ ಸೋಲುಗಳು ಪಾಠ ಕಲಿಸುತ್ತವೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್