
ಕೊಡಗು (ಜ.24): ರಾಹುಲ್ ಭೇಟಿ ಕೊಡುವ ಎಲ್ಲಾ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್'ಗೆ ನಿರ್ಧರಿಸಲಾಗಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ರಾಹುಲ್ ರಾಜ್ಯ ಭೇಟಿ ವೇಳೆ ಅವರು ಭೇಟಿ ಕೊಡುವ ಜಿಲ್ಲಾ ವ್ಯಾಪ್ತಿಯಲ್ಲಿ ಬಂದ್'ಗೆ ಬೆಂಬಲ ನೀಡಲಾಗುತ್ತದೆ. ಮಹದಾಯಿ ವಿಚಾರದಲ್ಲಿ ರಾಹುಲ್ ನಿಲುವು ಸ್ಪಷ್ಟಪಡಿಸಲು ಆಗ್ರಹಿಸಿ ಬಂದ್ ಮಾಡುತ್ತೇವೆ. ಬಿಜೆಪಿಯಿಂದ ಬಂದ್ ಕರೆಗೆ ನಿರ್ಧರಿಸಲಾಗಿದೆ ಎಂದು ಬಿಎಸ್'ವೈ ಹೇಳಿದ್ದಾರೆ.
ಮಹದಾಯಿ ವಿಚಾರದಲ್ಲಿ ರಾಹುಲ್, ಸೋನಿಯಾ,ಸಿದ್ದರಾಮಯ್ಯ ನಿಲುವೇನು ಬಿಎಸ್ ವೈ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ನಮ್ಮ ಕಾರ್ಯಕ್ರಮ ವಿಫಲಗೊಳಿಸಲು ಸಿಎಂ ಯತ್ನಿಸುತ್ತಿದ್ದಾರೆ. ನಾಳೆ ಹಾಗೂ ಫೆಬ್ರವರಿ 4 ರ ಬಂದ್ ಹಿಂದೆ ನೇರವಾಗಿ ಸಿಎಂ ಕೈವಾಡವಿದೆ ಎಂದು ಬಿಎಸ್'ವೈ ಗಂಭೀರ ಆರೋಪ ಮಾಡಿದ್ದಾರೆ. ಏನೇ ಮಾಡಿದ್ರು ಕಾರ್ಯಕ್ರಮ ನಡೆದೇ ನಡೆಯುತ್ತೆ. ಬಿಜೆಪಿ ಯಾತ್ರೆಗೆ ತಡೆಯೊಡ್ಡಲು ಮುಂದಾಗಿರುವ ಕಾಂಗ್ರೆಸ್'ಗೆ ತಿರುಗೇಟು ಕೊಡಲು ಬಿಜೆಪಿ ಸಜ್ಜಾಗಿದೆ. ರಾಹುಲ್ ಗಾಂಧಿ ಭೇಟಿ ವೇಳೆ ತೀವ್ರ ಹೋರಾಟಕ್ಕೆ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಬಿಎಸ್'ವೈ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.