ಮುಂದಿನ ಬಾರಿ ನಾವು ನೀವು ಕೂಡಿ ಆಡಳಿತ ನಡೆಸೋಣ ಬಿಡ್ರಿ; ಹೀಗಂತ ಸಿಎಂ ಹೇಳಿದ್ದು ಯಾರಿಗೆ ಗೊತ್ತಾ?

Published : Sep 26, 2017, 06:46 PM ISTUpdated : Apr 11, 2018, 12:58 PM IST
ಮುಂದಿನ ಬಾರಿ ನಾವು ನೀವು ಕೂಡಿ ಆಡಳಿತ ನಡೆಸೋಣ ಬಿಡ್ರಿ; ಹೀಗಂತ ಸಿಎಂ ಹೇಳಿದ್ದು ಯಾರಿಗೆ ಗೊತ್ತಾ?

ಸಾರಾಂಶ

ರಾಜ್ಯದಲ್ಲಿ ಈ ಭಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತಾ.? ಹೀಗೊಂದು ಅನುಮಾನಕ್ಕೆ ಕಾರಣವಾಗಿರೋದು ಇಂದು ಕಾರ್ಯಕ್ರಮವೊಂದ್ರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ ಮಾತು. 

ಬೆಂಗಳೂರು (ಸೆ.26): ರಾಜ್ಯದಲ್ಲಿ ಈ ಭಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತಾ.? ಹೀಗೊಂದು ಅನುಮಾನಕ್ಕೆ ಕಾರಣವಾಗಿರೋದು ಇಂದು ಕಾರ್ಯಕ್ರಮವೊಂದ್ರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ ಮಾತು. 

ಮಹಾಲಕ್ಷ್ಮಿ ಬಡಾವಣೆಯ ಅಭಿವೃಧ್ದಿ ಕಾಮಗಾರಿಗಳ ಉದ್ಘಾಟನೆ ಮಾಡಿದ ಸಿಎಂ , ಜೆಡಿಎಸ್ ಶಾಸಕ  ಗೋಪಾಲಯ್ಯಗೆ ಟಾಂಗ್ ಕೊಡ್ತಾ  ಇವತ್ತು ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿನ ಬಾರಿ ನಾವು ನೀವು ಕೂಡಿ ಆಡಳಿತ ನಡೆಸೋಣ ಬಿಡ್ರೀ ಅಂತಾ  ಹೇಳಿದರು.  ಇದು ಮುಂದಿನ  ಬಾರಿ ಜೆಡಿಎಸ್ ಜೊತೆಗೆ ಕೈ ಜೋಡಿಸುವ ಮುನ್ಸೂಚನೆಯಾ ಅನ್ನೋ ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ಅಭಿವೃಧ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ,  ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಹೇಳಿಕೊಳ್ಳುತ್ತಿದ್ದರು. ಈ  ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಸ್ಥಳೀಯ ಜೆಡಿಎಸ್ ಶಾಸಕ ಗೋಪಾಲಯ್ಯರನ್ನು ಸಾಕಷ್ಟು ಕಾಲೆಳೆಯುತ್ತಿದ್ದರು. ಮುಂದಿನ ಬಾರಿ ಕೂಡಾ ನಾವೇ ಅಧಿಕಾರಕ್ಕೆ ಬರ್ತೀವಿ ಅಂದರು. ಇದಕ್ಕೆ ಗೋಪಾಲಯ್ಯ ಇಲ್ಲಾ ನಾವು ಬರ್ತೀವಿ ಅಂದ್ರು.  ತಕ್ಷಣ ಪ್ರತಿಕ್ರಿಯಿಸಿದ ಸಿಎಂ ಹೋಗ್ಲಿ ಬಿಡ್ರೀ ಇಬ್ರೂ ಸೇರಿಯೇ ಆಡಳಿತ ನಡೆಸೋಣ ಅಂದ್ರು.  ರಾಜ್ಯದಲ್ಲಿ ಈ ಭಾರಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತಾ.? ಹೀಗೊಂದು ಅನುಮಾನಕ್ಕೆ ಕಾರಣವಾಗಿರೋದು ಇಂದು ಕಾರ್ಯಕ್ರಮವೊಂದ್ರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ ಮಾತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌